ಬಿಗ್ ನ್ಯೂಸ್; ಬಿಜೆಪಿಯತ್ತ ಜಾಫರ್ ಷರೀಫ್?

Published : Apr 01, 2017, 07:36 AM ISTUpdated : Apr 11, 2018, 12:56 PM IST
ಬಿಗ್ ನ್ಯೂಸ್; ಬಿಜೆಪಿಯತ್ತ ಜಾಫರ್ ಷರೀಫ್?

ಸಾರಾಂಶ

ರಾಜಕೀಯ ಜೀವನದ ಆರಂಭದಿಂದಲೂ ಬಲಪಂಥೀಯರನ್ನು ಕಟುವಾಗಿ ಟೀಕಿಸಿಕೊಂಡು ಬಂದಿದ್ದ ಜಾಫರ್ ಷರೀಫ್ ಅವರು ತಮ್ಮ ವಿಚಾರಧಾರೆಯನ್ನು ಬದಲಿಸಿಕೊಂಡಿರುವುದು ಇಲ್ಲಿ ಗಮನಾರ್ಹ.

ಬೆಂಗಳೂರು(ಏ. 01): ಎಸ್ಸೆಮ್ ಕೃಷ್ಣ ನಂತರ ಇನ್ನಷ್ಟು ಹಿರಿಯ ಕಾಂಗ್ರೆಸ್ ಮುಖಂಡರು ಕೇಸರಿಪಾಳಯಕ್ಕೆ ಜಿಗಿಯಲಿದ್ದಾರೆಯೇ? ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ರೈಲ್ವೆ ಸಚಿವ ಜಾಫರ್ ಷರೀಫ್ ಅವರು ಬಿಜೆಪಿಯತ್ತ ವಾಲುತ್ತಿರುವ ಸೂಚನೆ ಕಾಣುತ್ತಿದೆ. ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ರಾಷ್ಟ್ರಪತಿ ಹುದ್ದೆಗೆ ಸೂಕ್ತ ಎಂದು ಜಾಫರ್ ಷರೀಫ್ ಅಭಿಪ್ರಾಯಪಟ್ಟಿರುವುದು ಮೇಲಿನ ಸುದ್ದಿಗೆ ಪುಷ್ಟಿ ನೀಡುವಂತಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಾವು ಬರೆದಿರುವ ಪತ್ರದಲ್ಲಿ ಮೋಹನ್ ಭಾಗವತ್ ವಿಚಾರವನ್ನು ಷರೀಫ್ ಪ್ರಸ್ತಾಪಿಸಿದ್ದಾರೆನ್ನಲಾಗಿದೆ. ಆರೆಸ್ಸೆಸ್ ಸರಸಂಘಚಾಲಕರು ರಾಷ್ಟ್ರಪತಿಯಾಗುವುದಾದರೆ, ತಮ್ಮದೇನು ಅಭ್ಯಂತರವಿಲ್ಲ ಎಂಬರ್ಥದಲ್ಲಿ ಷರೀಫ್ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

"ಮೋಹನ್ ಭಾಗವತ್ ಅವರ ರಾಷ್ಟ್ರಪ್ರೇಮ, ಹಾಗೂ ದೇಶದ ಜನರೆಡೆಗಿನ ಅವರ ಪ್ರೀತಿ ಪ್ರಶ್ನಾತೀತ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಅವರಿಗೆ ಬದ್ಧತೆ ಇದೆ. ಬಾಂಗ್ಲಾ ಯುದ್ಧದ ಸಮಯದಲ್ಲಿ ಅಂದಿನ ಪ್ರಧಾನಿ ಇಂದಿರಾ ಅವರಿಗೆ ಆರೆಸ್ಸೆಸ್ ಬೆಂಬಲ ನೀಡಿತ್ತು. ಇದು ಆರೆಸ್ಸೆಸ್'ಗೆ ಪ್ರಜಾಪ್ರಭುತ್ವದಲ್ಲಿರುವ ನಂಬಿಕೆಯನ್ನು ತೋರಿಸುತ್ತದೆ. ಮೋಹನ್ ಭಾಗವತ್ ಅವರನ್ನು ರಾಷ್ಟ್ರಪತಿ ಹುದ್ದೆಗೆ ಶಿಫಾರಸು ಮಾಡಿದರೆ ಅಲ್ಪಸಂಖ್ಯಾತರು ಭಯಪಡಬೇಕಿಲ್ಲ" ಎಂದು ಜಾಫರ್ ಷರೀಫ್ ತಿಳಿಸಿದ್ದಾರೆ.

ರಾಜಕೀಯ ಜೀವನದ ಆರಂಭದಿಂದಲೂ ಬಲಪಂಥೀಯರನ್ನು ಕಟುವಾಗಿ ಟೀಕಿಸಿಕೊಂಡು ಬಂದಿದ್ದ ಜಾಫರ್ ಷರೀಫ್ ಅವರು ತಮ್ಮ ವಿಚಾರಧಾರೆಯನ್ನು ಬದಲಿಸಿಕೊಂಡಿರುವುದು ಇಲ್ಲಿ ಗಮನಾರ್ಹ.

ರಾಜ್ಯದ ಕಾಂಗ್ರೆಸ್ ನಾಯಕತ್ವ ವಿಚಾರದಲ್ಲಿ ಅಸಮಾಧಾನಗೊಂಡ ಹಿರಿಯ ಕಾಂಗ್ರೆಸ್ಸಿಗರಲ್ಲಿ ಷರೀಫ್ ಕೂಡ ಒಬ್ಬರು. ಸಿಎಂ ಸಿದ್ದರಾಮಯ್ಯ ವಿರುದ್ಧ ಷರೀಫ್ ಸಾಕಷ್ಟು ಬಾರಿ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ನಿನ್ನೆಯಷ್ಟೇ ಷರೀಫ್ ಅವರು ದೆಹಲಿಯಲ್ಲಿ ಬಿಜೆಪಿಯ ಪ್ರಮುಖ ನಾಯಕರನ್ನು ಭೇಟಿಯಾಗಿರುವುದು ಮುಂದಿನ ಬೆಳವಣಿಗೆಗಳಿಗೆ ಧ್ಯೋತಕವಾಗಿದೆ. ಬಿಜೆಪಿ ಮೂಲಗಳ ಪ್ರಕಾರ, ಷರೀಫ್ ಅವರು ಕೇಸರಿ ಪಾಳಯ ಸೇರಿಕೊಳ್ಳುವ ಇಚ್ಛೆ ಹೊಂದಿದ್ದು, ಶೀಘ್ರದಲ್ಲೇ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಹೊಸ 600 ಪಿಎಸ್‌ಐ ನೇಮಕಾತಿ ಪ್ರಕ್ರಿಯೆ ಶೀಘ್ರವೇ ಆರಂಭ: ಗೃಹ ಸಚಿವ ಪರಮೇಶ್ವರ್‌
ಕನ್ನಡ ಭಾಷೆ ಕಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಸಚಿವ ಮಧು ಬಂಗಾರಪ್ಪ