ಮೋದಿ ಸ್ವಾಗತಿಸದೇ ಸಿದ್ದರಾಮಯ್ಯ ದುರಹಂಕಾರ ಪ್ರದರ್ಶನ: ಶೆಟ್ಟರ್

Published : Oct 30, 2017, 03:11 PM ISTUpdated : Apr 11, 2018, 01:07 PM IST
ಮೋದಿ ಸ್ವಾಗತಿಸದೇ ಸಿದ್ದರಾಮಯ್ಯ ದುರಹಂಕಾರ ಪ್ರದರ್ಶನ: ಶೆಟ್ಟರ್

ಸಾರಾಂಶ

ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿ ಗೌರವಿಸಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುರಾಡಳಿತ, ದುರಹಂಕಾರದಿಂದ ನಡೆದುಕೊಂಡಿದ್ದು, ರಾಜ್ಯ ಸರ್ಕಾರದ ಲೋಪ ಮಾಡಿದಂತಾಗಿದೆ ಎಂದು ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಜಗದೀಶ ಶೆಟ್ಟರ್ ಆರೋಪಿಸಿದರು.

ಬೀದರ್: ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿ ಗೌರವಿಸಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುರಾಡಳಿತ, ದುರಹಂಕಾರದಿಂದ ನಡೆದುಕೊಂಡಿದ್ದು, ರಾಜ್ಯ ಸರ್ಕಾರದ ಲೋಪ ಮಾಡಿದಂತಾಗಿದೆ ಎಂದು ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಜಗದೀಶ ಶೆಟ್ಟರ್ ಆರೋಪಿಸಿದರು.

ನೆಹರು ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ಈ ದೇಶದ ಪ್ರಧಾನಿಯೊಬ್ಬರು ರಾಜ್ಯಕ್ಕೆ ಆಗಮಿಸಿ ಸರ್ಕಾರಿ ಕಾರ್ಯಕ್ರಮವನ್ನು ಉದ್ಘಾಟಿಸುವ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಗೌರವ ತೋರಿದ್ದಾರೆ ಎಂದರು.

ಪ್ರಧಾನಿಗೆ ಅಗೌರವ ತೋರುವುದು ಇಡೀ ದೇಶಕ್ಕೆ ಅಗೌರವ ತೋರಿದಂತೆ ಎಂದು ಹೇಳಿದ ಅವರು, ಇದನ್ನು ರಾಜ್ಯದ ಜನತೆ ಸಹಿಸಲ್ಲ. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜಗದೀಶ ಶೆಟ್ಟರ್ ಎಚ್ಚರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌