‘ಪರಮೇಶ್ವರ್, ಡಿಕೆಶಿ ಜೆಡಿಎಸ್ ವಕ್ತಾರರು’

Published : Sep 03, 2018, 09:38 AM ISTUpdated : Sep 09, 2018, 08:52 PM IST
‘ಪರಮೇಶ್ವರ್, ಡಿಕೆಶಿ ಜೆಡಿಎಸ್ ವಕ್ತಾರರು’

ಸಾರಾಂಶ

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಜಲ ಸಂಪನ್ಮೂಲ ಸಚಿವ ಡಿ. ಕೆ.ಶಿವಕುಮಾರ್ ಅವರು ಜೆಡಿಎಸ್ ವಕ್ತಾರರಾಗಿ ಇರುವಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.   

ದಾವಣಗೆರೆ: ಸಮ್ಮಿಶ್ರ ಸರ್ಕಾರದಲ್ಲಿ ಸ್ಥಾನ ಮಾನ ನೀಡಿದ್ದಕ್ಕಾಗಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಜಲ ಸಂಪನ್ಮೂಲ ಸಚಿವ ಡಿ. ಕೆ.ಶಿವಕುಮಾರ್ ಅವರು ಜೆಡಿಎಸ್ ವಕ್ತಾರರಂತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. 

ಸಿದ್ದರಾಮಯ್ಯ ಸರ್ಕಾರದಲ್ಲಿ ಡಾ.ಜಿ.ಪರಮೇ ಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿದ್ದರೂ ಸಚಿವ ಸ್ಥಾನ ನೀಡಿರಲಿಲ್ಲ. ಧರಂಸಿಂಗ್ ಮುಖ್ಯಮಂತ್ರಿಯಾಗಿ ದ್ದಾಗ ಡಿ.ಕೆ.ಶಿವಕುಮಾರಗೆ ಸಚಿವ ಸ್ಥಾನ ನೀಡಿರಲಿಲ್ಲ. 

ದೇವೇಗೌಡರ ಆಶೀರ್ವಾದ, ಕುಮಾರಸ್ವಾಮಿ ಕೃಪೆಯಿಂದ ಈಗ ಇಬ್ಬರಿಗೂ ಸ್ಥಾನಮಾನ ಸಿಕ್ಕಿದ್ದರಿಂದ ಅದರ ಋಣ ತೀರಿಸಲು ಜೆಡಿಎಸ್ ವಕ್ತಾರರಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶೆಟ್ಟರ್ ಟೀಕಿಸಿದರು. ಪರಮೇಶ್ವರ್‌ಗೆ ಅಧಿಕಾರ ಬೇಕು. ಡಿ.ಕೆ.ಶಿವಕುಮಾರಗೆ ಸಚಿವ ಸ್ಥಾನ ಬೇಕು. ಇಬ್ಬರಿಗೂ ದೇವೇಗೌಡರ ಶ್ರೀರಕ್ಷೆ ಇದ್ದು, ಈ ಕಾರಣಕ್ಕೆ ಡಿಸಿಎಂ, ಸಚಿವರಾಗಿದ್ದಾರೆ. 

ಪರಮೇಶ್ವರ ಬಹಳ ವರ್ಷಗಳ ನಂತರ ಡಿಸಿಎಂ ಆಗಿದ್ದಾರೆ. ಹೊರಗಡೆ ಜೆಡಿಎಸ್ ವಕ್ತಾರರಂತೆ ವರ್ತಿಸಿದರೂ, ಒಳಗೊಳಗೇ ಜೆಡಿಎಸ್ ವಿರುದ್ಧವಿದ್ದಾರೆ ಎಂದರು. ಓಟು ಬ್ಯಾಂಕ್ ಪಾಲಿಟಿಕ್ಸ್‌ನಿಂದ ಕಾಂಗ್ರೆಸ್ಸಿ ನವರು ದೇಶವನ್ನೇ ಹಾಳು ಮಾಡಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!