ಆಂಧ್ರ ಸಿಎಂ ಆಗಿ ಜಗನ್ ಪ್ರಮಾಣವಚನ: ಬಾರದ ನಾಯ್ಡು!

Published : May 30, 2019, 01:07 PM IST
ಆಂಧ್ರ ಸಿಎಂ ಆಗಿ ಜಗನ್ ಪ್ರಮಾಣವಚನ: ಬಾರದ ನಾಯ್ಡು!

ಸಾರಾಂಶ

ಆಂಧ್ರದ ಸಿಎಂ ಆಗಿ ಜಗನ್ ಮೋಹನ್ ರೆಡ್ಡಿ ಪ್ರಮಾಣವಚನ| ಆಂಧ್ರದ ನೊಗ ಹೊತ್ತ YSR ಕಾಂಗ್ರೆಸ್ ಮುಖ್ಯಸ್ಥ| ಪ್ರಮಾಣವಚನ ಬೋಧಿಸಿದ ರಾಜ್ಯಪಾಲ ESL ನರಸಿಂಹನ್| ಜಗನ್ ಪ್ರಮಾಣವಚನ ಸಮಾರಂಭಕ್ಕೆ ಬಾರದ ಚಂದ್ರಬಾಬು ನಾಯ್ಡು| ತೆಲಂಗಾಣ ಸಿಎಂ ಕೆಸಿಆರ್, ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಭಾಗಿ|

ವಿಜಯವಾಡಾ(ಮೇ.30): ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ YSR ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯ ವಿಭಜನೆ ಬಳಿಕ ಆಂಧ್ರದ ಎರಡನೇ ಸಿಎಂ ಎಂಬ ಹೆಗ್ಗಳಿಕೆಗೆ ಜಗನ್ ಪಾತ್ರರಾಗಿದ್ದಾರೆ.

ವಿಜಯವಾಡಾದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಮಾರಂಭದಲ್ಲಿ ರಾಜ್ಯಪಾಲ ESL ನರಸಿಂಹನ್ ಅವರು ಜಗನ್ ಮೋಹನ್ ರೆಡ್ಡಿಗೆ ಪ್ರಮಾಣವಚನ ಬೋಧಿಸಿದರು.

ಇನ್ನು ಜಗನ್ ಪ್ರಮಾಣವಚನ ಸಮಾರಂಭಕ್ಕೆ ತೆಲಂಗಾಣ ಸಿಎಂ ಕೆಸಿ ಚಂದ್ರಶೇಖರ್ ರಾವ್, ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಆದರೆ ಜಗನ್ ಪ್ರಮಾಣವಚನ ಸಮಾರಂಭಕ್ಕೆ ನಿರ್ಗಮಿತ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಗೈರು ಹಾಜರಾಗಿದ್ದರು. ಜಗನ್ ಅವರಿಗೆ ಶುಭ ಕೋರಲು ಟಿಡಿಪಿಯ ನಿಯೋಗ ಮಾತ್ರ ಹಾಜರಾಗಿತ್ತು.

ಒಟ್ಟು 175 ವಿಧಾನಸಭಾ ಕ್ಷೇತ್ರಗಳ ಪೈಕಿ 151 ಕ್ಷೇತ್ರಗಳಲ್ಲಿ ಜಯಬೇರಿ ಬಾರಿಸಿರುವ YSR ಕಾಂಗ್ರೆಸ್, 25 ಲೋಕಸಭಾ ಕ್ಷೇತ್ರಗಳ ಪೈಕಿ 22 ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಸಂಪೂರ್ಣ ಆಂಧ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು