ಜಗ್ಗೇಶ್ ಪುತ್ರನ ಮೇಲೆ ಹಲ್ಲೆ ಪ್ರಕರಣ: ಆರೋಪಿಯಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ

Published : Aug 20, 2017, 05:59 PM ISTUpdated : Apr 11, 2018, 01:02 PM IST
ಜಗ್ಗೇಶ್ ಪುತ್ರನ ಮೇಲೆ ಹಲ್ಲೆ ಪ್ರಕರಣ: ಆರೋಪಿಯಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ

ಸಾರಾಂಶ

ಈಗಾಗಲೇ ಆರೋಪಿ ಶೋಧಕ್ಕಾಗಿ ವಿಶೇಷ 3 ಪೊಲೀಸ್  ತಂಡಗಳನ್ನು ರಚಿಸಲಾಗಿದೆ. ಕಳೆದ 6 ದಿನಗಳಿಂದ ಬೆಂಗಳೂರು ಸೇರಿದಂತೆ ಕೇರಳದಲ್ಲಿ ಆರೋಪಿಯನ್ನು ಆರ್.ಟಿ. ನಗರ ಪೊಲೀಸರು ಹುಡುಕುತ್ತಿದ್ದಾರೆ.

ಬೆಂಗಳೂರು(ಆ.20): ಜಗ್ಗೇಶ್ ಅವರ ಪುತ್ರ ನಟ ಗುರುರಾಜ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಶಿವಶಂಕರ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ. ಆರೋಪಿ ನಿನ್ನೆ ನಿರೀಕ್ಷಣಾ ಜಾಮೀನಿಗೆ  ಅರ್ಜಿ ಸಲ್ಲಿಸಿದ್ದಾನೆ.

ಈಗಾಗಲೇ ಆರೋಪಿ ಶೋಧಕ್ಕಾಗಿ ವಿಶೇಷ 3 ಪೊಲೀಸ್  ತಂಡಗಳನ್ನು ರಚಿಸಲಾಗಿದೆ. ಕಳೆದ 6 ದಿನಗಳಿಂದ ಬೆಂಗಳೂರು ಸೇರಿದಂತೆ ಕೇರಳದಲ್ಲಿ ಆರೋಪಿಯನ್ನು ಆರ್.ಟಿ. ನಗರ ಪೊಲೀಸರು ಹುಡುಕುತ್ತಿದ್ದಾರೆ. ಘಟನೆ ನಂತರ ಆರೋಪಿ ಮೋಬೈಲ್'ಅನ್ನು ಮನೆಯಲ್ಲಿ ಬಿಟ್ಟುಹೋಗಿದ್ದಾನೆ.

ಗುರುರಾಜ್ ಅವರು ಮಗನನ್ನು ಶಾಲೆಗೆ ಬಿಡಲು ಹೋದಂತಹ ಸಂದರ್ಭದಲ್ಲಿ ಆರ್​.ಟಿ.ನಗರದಲ್ಲಿ ವೇಗದ ಚಾಲನೆ ವಿಚಾರವಾಗಿ ಮಾತಿಗೆ ಮಾತು ಬೆಳೆದು ಆರೋಪಿ ಚಾಕುವಿನಿಂದ ಇರಿದಿದ್ದ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ
ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು