ಆಧಾರ್ ಬಗ್ಗೆ ಸರ್ಕಾರಕ್ಕೆ ಸುಪ್ರೀಂ ತರಾಟೆ

Published : Feb 14, 2017, 07:11 AM ISTUpdated : Apr 11, 2018, 01:11 PM IST
ಆಧಾರ್ ಬಗ್ಗೆ ಸರ್ಕಾರಕ್ಕೆ ಸುಪ್ರೀಂ ತರಾಟೆ

ಸಾರಾಂಶ

ನಿಮ್ಮ ಉದ್ದೇಶವು ಒಳ್ಳೆಯದಿರಬಹುದು, ಆದರೆ ಅದು ಹಣಕಾಸು ಮಸೂದೆಯೋ, ಅಲ್ಲವೋ ಎಂಬುವುದೇ ನಮ್ಮ ಮುಂದಿರುವ ಪ್ರಶ್ನೆಯೆಂದು ನ್ಯಾ. ಖೆಹರ್ ಹೇಳಿದ್ದಾರೆ.

ನವದೆಹಲಿ(ಫೆ.14): ಆಧಾರ್ ಮಸೂದೆಯನ್ನು ಹಣಕಾಸು ಮಸೂದೆಯಾಗಿ ಅಂಗೀಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಒಪ್ಪಿದೆ

ಕೇಂದ್ರ ಸರ್ಕಾರವು ಆಧಾರ್ ಮಸೂದೆಯನ್ನು  ಸಂಸತ್ತಿನಲ್ಲಿ ಹಣಕಾಸು ಮಸೂದೆ ಎಂದು ಮಂಡಿಸಿ ಅದಕ್ಕೆ ಅನುಮೋದನೆ ಪಡೆದಿತ್ತು. ಅದನ್ನು ಪ್ರಶ್ನಿಸಿ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಜೈರಾಮ್ ರಮೇಶ್ ಸುಪ್ರೀಂ ಮೆಟ್ಟಿಲೇರಿದ್ದರು.

ಸಂಸತ್ತಿನ ಕಲಾಪಗಳಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವಂತಿಲ್ಲ, ಇಲ್ಲಿ ಸ್ಪೀಕರ್ ತೀರ್ಮಾನವೇ ಅಂತಿಮವೆಂದು ಸರ್ಕಾರ ಪರ ಅಟಾರ್ನಿ ಜನರಲ್ ಮುಕುಲ್ ರೊಹ್ಟಗಿ ಆಕ್ಷೇಪಿಸಿದರು.

ಆದರೆ ಸರ್ಕಾರದ ವಾದಕ್ಕೆ ತಿರುಗೇಟು ನೀಡಿದ ಮು. ನ್ಯಾ. ಜೆ. ಎಸ್. ಖೆಹರ್, ಸ್ಪೀಕರ್ ನೀಲಿ ಬಣ್ಣವನ್ನು ಹಸಿರೆಂದು ಹೇಳಿದರೆ, ನಾವು ನೀಲಿ ಬಣ್ಣವನ್ನು ನೀಲಿಯೆಂದೂ, ಅದು ಹಸಿರಲ್ಲವೆಂದು ಅವರಿಗೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ.

ಆಧಾರನ್ನು ಸಬ್ಸಿಡಿ ಯೋಜನೆಗಳಿಗೆ ಜೋಡಿಸುವ ಮೂಲಕ ಸರ್ಕಾರವು 30 - 50 ರಿಂದ ಕೋಟಿ ರೂಪಾಯಿಗಳನ್ನು ಉಳಿಸಿದೆ ಎಂದು ರೊಹ್ಟಗಿ ವಾದಿಸಿದಾಗ, ನಿಮ್ಮ ಉದ್ದೇಶವು ಒಳ್ಳೆಯದಿರಬಹುದು, ಆದರೆ ಅದು ಹಣಕಾಸು ಮಸೂದೆಯೋ, ಅಲ್ಲವೋ ಎಂಬುವುದೇ ನಮ್ಮ ಮುಂದಿರುವ ಪ್ರಶ್ನೆಯೆಂದು ನ್ಯಾ. ಖೆಹರ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಿಎಫ್ ಹಣ ಹಿಂಪಡೆಯುವ ನೀತಿಯಲ್ಲಿ 11 ಬದಲಾವಣೆ, EPFO 3.0 ನಿಯಮ ಜಾರಿ
ಕ್ರಿಸ್ಮಸ್ ಹಬ್ಬಕ್ಕೆ ಭಾರತದ ಹಲವು ನಗರದಲ್ಲಿ ಡ್ರೈ ಡೇ; ಮದ್ಯದಂಗಡಿ, ಬಾರ್ ತೆರೆದಿರುತ್ತಾ?