
ಶಿಮ್ಲಾ: ಹಿಮಾಚಲ ಪ್ರದೇಶದ ಸಿಎಂ ಆಗಿ ಜೈರಾಮ್ ಠಾಕೂರ್ ಆಯ್ಕೆಯಾಗಿದ್ದಾರೆ.
ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಜೈರಾಮ್ ಠಾಕೂರ್ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿದೆ.
28 ವರ್ಷಕ್ಕೇ ಶಾಸಕರಾಗಿದ್ದ ಜೈರಾಮ್ ಠಾಕೂರ್ ಪತ್ನಿ ಡಾ. ಸಾಧನಾ ಠಾಕೂರ್ ಓರ್ವ ಕನ್ನಡತಿ. ಮೂಲತ: ಶಿವಮೊಗ್ಗದವರಾದ ಸಾಧನಾ ಕುಟುಂಬವು ಜೈಪುರಕ್ಕೆ ವಲಸೆ ಹೋಗಿ ನೆಲೆಸಿತ್ತು.
ಎಬಿವಿಪಿ ಕಾರ್ಯಕರ್ತೆಯಾಗಿದ್ದ ಸಾಧನಾ ಅವರನ್ನು ಜೈರಾಮ್ ಠಾಕೂರ್ ಮದುವೆಯಾಗಿದ್ದರು.
ಸಿಎಂ ಅಭ್ಯರ್ಥಿಯಾಗಿದ್ದ ಪ್ರೇಮಚಂದ್ರ ಧುಮಾಲ್ ಸೋಲಿನ ಹಿನ್ನೆಲೆಯಲ್ಲಿ ಜೈರಾಮ್ಗೆ ಸಿಎಂ ಪಟ್ಟ ದಕ್ಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.