ರೈಲು ಪ್ರಯಾಣಿಕರಿಗೆ ಕಹಿಸುದ್ದಿಯ ಮುನ್ಸೂಚನೆ ಕೊಟ್ಟ ಜೇಟ್ಲಿ

Published : Dec 20, 2016, 10:54 AM ISTUpdated : Apr 11, 2018, 12:45 PM IST
ರೈಲು ಪ್ರಯಾಣಿಕರಿಗೆ ಕಹಿಸುದ್ದಿಯ ಮುನ್ಸೂಚನೆ ಕೊಟ್ಟ ಜೇಟ್ಲಿ

ಸಾರಾಂಶ

ಜನಪ್ರಿಯ ಯೋಜನೆಗಳಲ್ಲಿ ಗ್ರಾಹಕರು, ಸೇವೆಗೆ ತಕ್ಕ ಹಣ ನೀಡಬೇಕಿಂದಿಲ್ಲ. ನಾವು ರೈಲ್ವೇ ಇಲಾಖೆಯನ್ನು ಸ್ವಾವಲಂಬಿ ಮಾಡುವ ಮೂಲಕ ವಿಶ್ವದರ್ಜೆ ಸೇವೆಯನ್ನು ಒದಗಿಸುವ ಉದ್ದೇಶವನ್ನಿಟ್ಟುಕೊಂಡಿದ್ದೇವೆ ಎಂದು ಜೇಟ್ಲಿ ಹೇಳಿದ್ದಾರೆ.

ನವದೆಹಲಿ (ಡಿ.20): ರೈಲು ಪ್ರಯಾಣಿಕರಿಗೆ ಮುಂದಿನ ದಿನಗಳಲ್ಲಿ ಶಾಕ್ ಕಾದಿದೆ. ಇಂತಹ ಒಂದು ಮುನ್ಸೂಚನೆಯನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ನೀಡಿದ್ದಾರೆ.

ಭಾರತೀಯ ಉದ್ಯಮ ಒಕ್ಕೂಟ (ಸಿಐಐ) ಆಯೋಜಿಸಿದ್ದ ‘ಭಾರತೀಯ ರೈಲ್ವೇಯಲ್ಲಿ ಲೆಕ್ಕಪತ್ರ ಸುಧಾರಣೆ’ಗೆ ಸಂಬಂಧಿಸಿದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಜೇಟ್ಲಿ, ಗ್ರಾಹಕರು ಸೇವೆಗಳಿಗೆ ತಕ್ಕವಾಗಿ ಪಾವತಿಸುವ ವ್ಯವಸ್ಥೆಗಳು ಜಗತ್ತಿನಾದ್ಯಂತ ಯಶಸ್ವಿಯಾಗಿ ನಡೆಯುತ್ತವೆ ಎಂದು ಹೇಳಿದ್ದಾರೆ.

ಜನಪ್ರಿಯ ಯೋಜನೆಗಳಲ್ಲಿ ಗ್ರಾಹಕರು, ಸೇವೆಗೆ ತಕ್ಕ ಹಣ ನೀಡಬೇಕಿಂದಿಲ್ಲ. ನಾವು ರೈಲ್ವೇ ಇಲಾಖೆಯನ್ನು ಸ್ವಾವಲಂಬಿ ಮಾಡುವ ಮೂಲಕ ವಿಶ್ವದರ್ಜೆ ಸೇವೆಯನ್ನು ಒದಗಿಸುವ ಉದ್ದೇಶವನ್ನಿಟ್ಟುಕೊಂಡಿದ್ದೇವೆ ಎಂದು ಜೇಟ್ಲಿ ಹೇಳಿದ್ದಾರೆ.

ಪ್ರತ್ಯೇಕ ರೈಲು ಬಜೆಟ್ ಮಂಡಿಸುವ 92 ವರ್ಷಗಳ ಸಂಪ್ರದಾಯಕ್ಕೆ ಕೊನೆಹಾಡುವ ನಿರ್ಧಾರವನ್ನು ಸರ್ಕಾರ  ಹಿಂದೆ ಘೋಷಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರಾವಳಿ ಉತ್ಸವ: ಹೆಲಿಕಾಪ್ಟರ್‌ನಲ್ಲಿ ಹಾರಾಡಿದ ವಿಶೇಷ ಚೇತನ ಮಕ್ಕಳು, ಸತೀಶ್ ಸೈಲ್ ಪುತ್ರಿಯ ಈ ಮಹತ್ಕಾರ್ಯಕ್ಕೆ ಜೈ ಎಂದ ಜನತೆ
ಸಚಿವ ಜಮೀರ್ ಆಪ್ತ ಸರ್ಫರಾಜ್ ಖಾನ್ ಮೇಲೆ ಲೋಕಾಯುಕ್ತ ದಾಳಿ: ಬಯಲಾಯ್ತು ಕೋಟಿ ಕೋಟಿ ಸಾಮ್ರಾಜ್ಯ!