
ನವದೆಹಲಿ (ಫೆ.01): 2017-18 ಸಾಲಿನ ಬಜೆಟ್ ಮಂಡಿಸಿದ ಹಣಕಾಸು ಸಚಿವ ಅರುಣ್ ಜೇಟ್ಲಿ, ವ್ಯಾಪಾರ-ಸ್ನೇಹಿ ವಾತಾವರಣ ರೂಪಿಸುವ ನಿಟ್ಟಿನಲ್ಲಿ ಕೆಲವು ಪ್ರಮುಖ ಕ್ರಮಗಳನ್ನು ಘೋಷಿಸಿದ್ದಾರೆ.
ಈವರೆಗೆ, ಒಂದು ಕೋಟಿಗಿಂತ ಕಡಿಮೆ ವಹಿವಾಟು ನಡೆಸುವ ವರ್ತಕರ ಆದಾಯವನ್ನು ವಹಿವಾಟಿನ ಶೇ.8 ಎಂದು ಪರಿಗಣಿಸಲಾಗುತ್ತದೆ. ಒಂದು ಕೋಟಿಗಿಂತ ಹೆಚ್ಚು ವಹಿವಾಟು ನಡೆಸುವ ವರ್ತಕರು, ಸಮರ್ಪಕವಾಗಿ ಲೆಕ್ಕ ಪರಿಶೋಧನೆ ನಡೆಸಿ ಅದರನ್ವಯ ಆದಾಯ ತೆರಿಗೆ ಪಾವತಿಸಬೆಕಿತ್ತು.
ಈ ಬಜೆಟ್’ನಲ್ಲಿ ಒಂದು ಕೋಟಿ ಮಿತಿಯನ್ನು ಎರಡು ಕೋಟಿಗಳಿಗೆ ಹೆಚ್ಚಿಸುವ ಮೂಲಕ ಜೇಟ್ಲಿ, 2 ಕೋಟಿ ರೂ.ವರೆಗೆ ವಹಿವಾಟು ನಡೆಸುವ ಸಣ್ಣ ವರ್ತಕರ ‘ಲೆಕ್ಕಪತ್ರಗಳ ತಲೆಬಿಸಿ’ಯನ್ನು ಕಡಿಮೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.