18 ತಿಂಗಳೊಳಗೆ ಕಾಶ್ಮೀರಿ ನಾಯಕರ ಬಿಡುಗಡೆ: ಕೈಗೆ ಸಚಿವ ಸಿಂಗ್‌ ಟಾಂಗ್‌!

Published : Sep 19, 2019, 08:12 AM IST
18 ತಿಂಗಳೊಳಗೆ ಕಾಶ್ಮೀರಿ ನಾಯಕರ ಬಿಡುಗಡೆ: ಕೈಗೆ ಸಚಿವ ಸಿಂಗ್‌ ಟಾಂಗ್‌!

ಸಾರಾಂಶ

ಜಮ್ಮು-ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಗಲಭೆ-ಹಿಂಸಾಚಾರ ತಡೆಯುವ ನಿಟ್ಟಿನಲ್ಲಿ ಬಂಧನ| 18 ತಿಂಗಳೊಳಗೆ ಕಾಶ್ಮೀರಿ ನಾಯಕರ ಬಿಡುಗಡೆ: ಕೈಗೆ ಸಚಿವ ಸಿಂಗ್‌ ಟಾಂಗ್‌| 

ನವದೆಹಲಿ[ಸೆ.19]: ಜಮ್ಮು-ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಗಲಭೆ-ಹಿಂಸಾಚಾರ ತಡೆಯುವ ನಿಟ್ಟಿನಲ್ಲಿ ಬಂಧನದಲ್ಲಿಡಲಾಗಿರುವ ರಾಜ್ಯದ ರಾಜಕೀಯ ನಾಯಕರನ್ನು 18 ತಿಂಗಳ ಒಳಗಾಗಿ ಬಿಡುಗಡೆ ಮಾಡುವುದಾಗಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಅವರು ಹೇಳಿದ್ದಾರೆ.

ಈ ಮೂಲಕ 1975ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದ ಮೇಲೆ ಹೇರಿದ್ದ ತುರ್ತುಪರಿಸ್ಥಿತಿ ಉಲ್ಲೇಖಿಸದೇ ಕಾಂಗ್ರೆಸ್‌ ಹಾಗೂ ಇತರ ವಿಪಕ್ಷಗಳ ನಾಯಕರನ್ನು ಟೀಕೆ ಮಾಡಿದ್ದಾರೆ.

ಜಮ್ಮುವಿನ ಕತ್ರಾದಲ್ಲಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್‌, ‘ಪ್ರತೀ ಬಾರಿಯು ಪತ್ರಕರ್ತರು ಪೊಲೀಸ್‌ ವಶದಲ್ಲಿರುವ ಜಮ್ಮು-ಕಾಶ್ಮೀರದ ರಾಜಕೀಯ ನಾಯಕರನ್ನು ಯಾವಾಗ ಬಿಡುಗಡೆ ಮಾಡುತ್ತೀರಿ ಎಂಬ ಪ್ರಶ್ನೆ ಇಡುತ್ತಾರೆ. ಇದಕ್ಕೆ ನಾನು 18 ತಿಂಗಳ ಒಳಗಾಗಿ ಎಂಬ ಉತ್ತರವನ್ನೇ ನೀಡುತ್ತಿದ್ದೇನೆ’ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಧ್ಯೆ ಖುರ್ಚಿ ಕಾದಾಟ ಇಲ್ಲ: ಬಸವರಾಜ ರಾಯರೆಡ್ಡಿ
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!