
ಶ್ರೀನಗರ[ಆ.20]:: ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷಾಧಿಕಾರ ರದ್ದು ಕ್ರಮದ ಹಿನ್ನೆಲೆಯಲ್ಲಿ ಜರುಗಿಸಲಾಗಿದ್ದ ಕಟ್ಟೆಚ್ಚರದ ನಡುವೆಯೂ ಪ್ರತ್ಯೇಕತಾವಾದಿ ಸಂಘಟನೆಗೆ ಸೇರಿದ ಸಯ್ಯದ್ ಅಲಿ ಶಾ ಗಿಲಾನಿಗೆ ನಾಲ್ಕು ದಿನಗಳ ಕಾಲ ಇಂಟರ್ನೆಟ್ ಸಂಪರ್ಕ ಕಲ್ಪಿಸಿಕೊಟ್ಟ ಆರೋಪ ಮೇಲೆ ಬಿಎಸ್ಸೆನ್ನೆಲ್ನ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಜಮ್ಮು ಕಾಶ್ಮೀರದ ಎಲ್ಲಾ ಕಡೆಗಳಲ್ಲಿ ಅಕ್ಟೋಬರ್ 4ರಿಂದಲೇ ಇಂಟರ್ನೆಟ್ ಹಾಗೂ ಫೋನ್ ಸಂಪರ್ಕಗಳೆಲ್ಲವೂ ಕಡಿತಗೊಳಿಸಲಾಗಿತ್ತು. ಆದರೆ ಈ ಎಲ್ಲಾ ಕಟ್ಟೆಚ್ಚರದ ನಡುವೆಯೂ ಹುರಿಯತ್ ಮುಖಂಡ ಗಿಲಾನಿ ತಮ್ಮ ಟ್ವೀಟರ್ ಖಾತೆಯಿಂದ ಟ್ವೀಟ್ ಮಾಡಿದ್ದರು.
ಇದು ಹೇಗೆ ಸಾಧ್ಯವಾಯಿತು ಎನ್ನುವುದಕ್ಕೆ ಉತ್ತರ ಕಂಡುಕೊಳ್ಳಲು ಹೊರಟ ಬಿಎಸ್ಸೆನ್ನೆಲ್ ಅಧಿಕಾರಿಗಳಿಗೆ ಗೊತ್ತಾಗಿದ್ದು, ತಮ್ಮದೇ ಇಂಟರ್ನೆಟ್ ಸಂಪರ್ಕ ಕಡಿತಗೊಂಡಿರಲಿಲ್ಲ ಎನ್ನುವುದು. ತನಿಖೆ ನಡೆಸಿದಾಗ ತಮ್ಮದೇ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಆ ಕಾರಣ ಕೂಡಲೇ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.