
ನವದೆಹಲಿ(ಜ.11): ನೋಟ್ ಅಮಾನ್ಯ ವಿರೋಧಿಸಿ ರಾಷ್ಟ್ರರಾಜಧಾನಿಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಜನವೇದನಾ ಸಮಾವೇಶದ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಡೆಗಣಿಸಲಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಮೊದಲ ಸಾಲಿನಲ್ಲಿ ಸೋತ ನಾಯಕರಿಗೆ ಮನ್ನಣೆ ನೀಡಿದ ಕಾಂಗ್ರೆಸ್ ಹೈಕಮಾಂಡ್, ಕಾಂಗ್ರೆಸ್ ಸರ್ಕಾರದ ಆಡಳಿತವಿರುವ ಮುಖ್ಯಮಂತ್ರಿಯನ್ನು ಕೊನೆಯ ಸಾಲಿನಲ್ಲಿ ಕೂರಿಸುವ ಮೂಲಕ ಅವರಿಗೆ ಸೂಕ್ತ ಮನ್ನಣೆ ನೀಡಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಇದಷ್ಟೇ ಅಲ್ಲದೆ ಸಿದ್ದರಾಮಯ್ಯ ಅವರಿಗೆ ವೇದಿಕೆಯಲ್ಲಿ ಮಾತನಾಡಲೂ ಕೂಡ ಅವಕಾಶವನ್ನು ನೀಡಿಲ್ಲ.
ಕಾಂಗ್ರೆಸ್ ಪಕ್ಷದ ನಾಯಕರಾದ ಆನಂದ್ ಶರ್ಮಾ, ಬಿ.ಕೆ.ಹರಿಪ್ರಸಾದ್, ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ಗಣ್ಯರಿಗೆ ಮೊದಲ ಸಾಲಿನಲ್ಲಿ ಕೂರಲು ಅವಕಾಶ ಕಲ್ಪಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.