ರೈಡ್ ಮಾಡಲು ಬಂದ ಐಟಿ ಅಧಿಕಾರಿಗಳನ್ನು ತಡೆದ ರೆಡ್ಡಿ ಭದ್ರತಾ ಸಿಬ್ಬಂದಿ

Published : Nov 21, 2016, 06:54 AM ISTUpdated : Apr 11, 2018, 12:50 PM IST
ರೈಡ್ ಮಾಡಲು ಬಂದ ಐಟಿ ಅಧಿಕಾರಿಗಳನ್ನು ತಡೆದ ರೆಡ್ಡಿ ಭದ್ರತಾ ಸಿಬ್ಬಂದಿ

ಸಾರಾಂಶ

ಬಳ್ಳಾರಿಯ ಎರಡು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ರೆಡ್ಡಿ ಒಡೆತನದ ಓಎಂಸಿ ಹಾಗೂ ಎಎಂಸಿ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಲಾಗಿದೆ.

ಬಳ್ಳಾರಿ(ನ.21): ಮಾಜಿ ಸಚಿವ ಜನಾರ್ದನ ರೆಡ್ಡಿ ಮನೆ ಮೇಲೆ ದಾಳಿ ನಡೆಸಲು ಬಂದ ಐಟಿ ಅಧಿಕಾರಿಗಳನ್ನು ಜನಾರ್ದನಾ ರೆಡ್ಡಿ ಭದ್ರತಾ ಸಿಬ್ಬಂದಿ ತಡೆದಿದ್ದಾರೆ. ಮೂವರು ಐಟಿ ಅಧಿಕಾರಿಗಳು ಬಳ್ಳಾರಿಯ ಸಿರಗುಪ್ಪ ರಸ್ತೆಯಲ್ಲಿರುವ 'ಕುಟೀರ' ರೆಡ್ಡಿ ಮನೆ ಮೇಲೆ ದಾಳಿ ನಡೆಸಲು ಬಂದಾಗ ಸುಮಾರು 10 ನಿಮಿಷಗಳ ಕಾಲ ಮನೆಯೊಳಗೆ ಬಿಡದೆ ತಡೆದಿದ್ದಾರೆ. ನಂತರ ಮನೆ ಪ್ರವೇಶಿಸಿದ ಅಧಿಕಾರಿಗಳು ಮನೆಯನ್ನು ತಪಾಸಣೆ ನಡೆಸಿ ಮಾಹಿತಿ ಪಡೆದರು ಎನ್ನಲಾಗಿದೆ.

ರೆಡ್ಡಿಯವರಿಂದ ಮಾಹಿತಿ ಪಡೆದ ಐಟಿ ಅಧಿಕಾರಿಗಳು ಮಗಳ ಮದುವೆ ಖರ್ಚಿನ ಬಗ್ಗೆ ವಿವರಣೆ ಕೇಳಿ ನೋಟಿಸ್ ನೀಡಿದ್ದಾರೆ. ಬಳ್ಳಾರಿಯ ಎರಡು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ರೆಡ್ಡಿ ಒಡೆತನದ ಓಎಂಸಿ ಹಾಗೂ ಎಎಂಸಿ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಲಾಗಿದೆ.ಎರಡು ಇನೋವಾ ವಾಹನಗಳಲ್ಲಿ ಆಗಮಿಸಿದ ಅಧಿಕಾರಿಗಳ ತಂಡ ಕಚೇರಿ ಒಳಗೆ ದಾಖಲೆ ಪತ್ರಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ. ಮದುವೆಯ ಅದ್ದೂರಿ ಆಮಂತ್ರಣ ಪತ್ರಿಕೆ, ಮದುವೆಗೆ ಬಂದಿದ್ದ ಗಣ್ಯರ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ.

ಜನಾರ್ದನ ರೆಡ್ಡಿ ಇತ್ತೀಚೆಗೆ ತಮ್ಮ ಮಗಳಾದ ಬ್ರಹ್ಮಿಣಿ ಮದುವೆಯನ್ನು ಸುಮಾರು 500 ಕೋಟಿ ರೂಪಾಯಿ ವೆಚ್ಚ ಮಾಡಿ ಮದುವೆ ಮಾಡಿದ್ದಾರೆ ಎಂದು ಆರೋಪಿಸಿ ಆರ್ ಟಿಐ ಕಾರ್ಯಕರ್ತ ನರಸಿಂಹ ಮೂರ್ತಿ ಅವರು ದೂರು ದಾಖಲಿಸಿದ್ದರು. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲುವಾಸ ಅನುಭವಿಸಿದ್ದು, ಅವರ ಎಲ್ಲಾ ಆಸ್ತಿ, ಬ್ಯಾಂಕ್ ಖಾತೆಯನ್ನು ಸಿಬಿಐ ಮುಟ್ಟುಗೋಲು ಹಾಕಿಕೊಂಡಿತ್ತು. ಹಾಗಿದ್ದ ಮೇಲೆ ಅದ್ದೂರಿ ಮದುವೆ ಮಾಡಲು ಹಣ ಎಲ್ಲಿಂದ ಬಂತು, ಹಣದ ಮೂಲದ ಬಗ್ಗೆ ತನಿಖೆಯಾಗಬೇಕೆಂದು ನರಸಿಂಹಮೂರ್ತಿ ಅವರು ದೂರಿನಲ್ಲಿ ಮನವಿ ಮಾಡಿದ್ದರು.

ಈ ಕುರಿತು, ಪ್ರತಿಕ್ರಿಯಿಸಿರುವ ದೂರುದಾರ ನರಸಿಂಹಮೂರ್ತಿ, ಐಟಿ ಇಲಾಖೆಗೆ 15ನೇ ತಾರೀಖಿನಂದೇ ಮದುವೆ ದಿನವೇ ದೂರು ನೀಡಿದ್ದೆ. ಅಂದೇ ರೇಡ್ ಮಾಡುವಂತೆ ಮನವಿ ಮಾಡಿದ್ದೆ. ಅವರಿಗೆ ರೇಡ್ ಮಾಡುವ ಅಧಿಕಾರವಿತ್ತು. ಇವತ್ತು ದಾಳಿ ನಡೆಸಿದ್ದಾರೆ. ರೆಡ್ಡಿ ಅವರಿಗೆ ಅವರೇ ಅವಕಾಶ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!