ಜನಾರ್ದನ ರೆಡ್ಡಿ ಕ್ಷಮೆ ಯಾಚಿಸಲು ಹೇಳಿದ ಬಿಎಸ್ ವೈ

Published : Nov 01, 2018, 07:31 AM IST
ಜನಾರ್ದನ ರೆಡ್ಡಿ ಕ್ಷಮೆ ಯಾಚಿಸಲು ಹೇಳಿದ ಬಿಎಸ್ ವೈ

ಸಾರಾಂಶ

ಮಾಜಿ ಸಚಿವ ಜನಾರ್ದನ ರೆಡ್ಡಿ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. 

ಬೆಂಗಳೂರು: ‘ಸಿದ್ದರಾಮಯ್ಯ ಪಾಪಗಳಿಂದಾಗಿಯೇ ಅವರು ಪುತ್ರಶೋಕ ಅನುಭವಿಸುವಂತಾಯಿತು’ ಎಂಬ ಹೇಳಿಕೆ ಬಗ್ಗೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. 

ರೆಡ್ಡಿ ಪರವಾಗಿ ತಾವು ಕ್ಷಮೆಯಾಚಿಸುವುದಾಗಿ ಅವರ ಆಪ್ತ, ಮೊಳಕಾಲ್ಮುರು ಶಾಸಕ ಬಿ.ಶ್ರೀರಾಮುಲು ಹೇಳಿದ್ದಾರೆ. ಇದೆಲ್ಲದರ ನಡುವೆ, ಸುದ್ದಿವಾಹಿನಿಗಳೊಂದಿಗೆ ಮಾತನಾಡಿದ ರೆಡ್ಡಿ, ಈ ಬಗ್ಗೆ ಸಿದ್ದರಾಮಯ್ಯ ಅಥವಾ ಜನರಿಗೆ ನೋವಾಗಿದ್ದರೆ ಕ್ಷಮೆಯಾಚಿಸುವುದಾಗಿ ಹೇಳಿದ್ದಾರೆ.

ಇದೆಲ್ಲದಕ್ಕೂ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ರೆಡ್ಡಿ ಒಬ್ಬ ಕ್ರಿಮಿನಲ್‌ ವ್ಯಕ್ತಿ, ಕ್ಷಮೆಗೆ ಅರ್ಹನಲ್ಲ. ಆದರೆ, ರೆಡ್ಡಿ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳಲ್ಲ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ