ಪುತ್ರಿ ಮದುವೆಗೆ ರೆಡ್ಡಿ ವ್ಯಯಿಸಿದ್ದು ಕೇವಲ ರೂ.30 ಕೋಟಿ...!!!

Published : Jan 12, 2017, 10:26 AM ISTUpdated : Apr 11, 2018, 01:00 PM IST
ಪುತ್ರಿ ಮದುವೆಗೆ ರೆಡ್ಡಿ ವ್ಯಯಿಸಿದ್ದು ಕೇವಲ ರೂ.30 ಕೋಟಿ...!!!

ಸಾರಾಂಶ

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವೈಭವೋಪೇತ ಮದುವೆ ಸಮಾರಂಭವು ದೇಶಾದಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಮದುವೆಗೆ ಸುಮಾರು ನೂರಾರು ಕೋಟಿ ರೂ.ಗಳನ್ನು ವ್ಯಯಮಾಡಲಾಗಿದೆ ಎಂದು ಅಂದಾಜಿಸಲಾಗಿತ್ತು. 

ಬೆಂಗಳೂರು (ಜ.12): ಕಳೆದ ನವೆಂಬರ್’ನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗಿದ ಮಗಳ ವಿವಾಹ ಸಮಾರಂಭಕ್ಕೆ ತಾನು ಖರ್ಚು ಮಾಡಿರುವುದು ಕೇವಲ ರೂ.30 ಕೋಟಿ ಮಾತ್ರವೆಂದು  ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಬಹಿರಂಗ ಪಡಿಸಿದ್ದಾರೆ.

ಆದಾಯ ತೆರಿಗೆ ಇಲಾಖೆಗೆ ಹಣಕಾಸಿನ ವಿವರ ನೀಡಿದ ಜನಾರ್ದನ ರೆಡ್ಡಿ, ಪುತ್ರಿ ಬ್ರಹ್ಮಿಣಿ ಮದುವೆಗೆ ರೂ. 30 ಕೋಟಿ ರೂ.ಗಳನ್ನು ಮಾತ್ರ ಖರ್ಚು ಮಾಡಿರುವುದಾಗಿ ಹೇಳಿದ್ದಾರೆ.

ಕಳೆದ ನ.16 ರಿಂದ 5 ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವೈಭವೋಪೇತ ಮದುವೆ ಸಮಾರಂಭವು ದೇಶಾದಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಮದುವೆಗೆ ಸುಮಾರು ನೂರಾರು ಕೋಟಿ ರೂ.ಗಳನ್ನು ವ್ಯಯಮಾಡಲಾಗಿದೆ ಎಂದು ಅಂದಾಜಿಸಲಾಗಿತ್ತು. 

ರೆಡ್ಡಿ ತನ್ನ ಮಗಳ ಮದುವೆಗೆ 600 ಕೋಟಿ ಹಣ ಖರ್ಚು ಮಾಡಿರುವುದಾಗಿ ಆರೋಪಿಸಿ ಮಾಹಿತಿ ಹಕ್ಕು ಕಾರ್ಯಕರ್ತ ನರಸಿಂಹಮೂರ್ತಿ ಎಂಬವರು  ಆದಾಯ ತೆರಿಗೆ ಇಲಾಖೆಗೆ ದೂರು ನೀಡಿದ್ದರು. ಬಳಿಕ ಜನಾರ್ದನ ರೆಡ್ಡಿಯ ಬಳ್ಳಾರಿ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.

ನ.8 ರಂದು ಕೇಂದ್ರ ಸರ್ಕಾರ ನೋಟು ಅಮಾನ್ಯ ಕ್ರಮವನ್ನು ಘೋಷಿಸಿದ ಬಳಿಕ, ನಗದು ಹಣಕ್ಕಾಗಿ ಸಾಮಾನ್ಯ ಜನತೆ ಪರದಾಡುತ್ತಿರುವಾಗ, ರೆಡ್ಡಿ ಬಳಿ ಅಷ್ಟೊಂದು ಹಣ ಎಲ್ಲಿಂದ ಬಂತು ಎಂಬ ಪ್ರಶ್ನೆಗಳು ಎದ್ದಿದ್ದವು. ಕ್ರೆಡಿಟ್, ಡೆಬಿಟ್ ಕಾರ್ಡ್ ಮತ್ತು ನಗದು ರೂಪದಲ್ಲಿ ಹಣ ಪಾವತಿ ಮಾಡಿರುವ ದಾಖಲೆಗಳನ್ನು ರೆಡ್ಡಿ ಆದಾಯ ತೆರಿಗೆ ಇಲಾಖೆಗೆ ಸಲ್ಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗರ್ಭಧರಿಸಿ 9 ತಿಂಗಳು ಪೂರೈಸಿದ ಹಸುವಿಗೆ ಸೀಮಂತ ಮಾಡಿದ ಮಂಡ್ಯ ರೈತ
ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌