
ಮಂಗಳೂರು (ಜ.22): ಜನವರಿ 26 ನೇ ತಾರೀಖು ಜನಾರ್ದನ ಪೂಜಾರಿ ಆತ್ಮಕಥೆ ಬಿಡುಗಡೆಯಾಗಲಿದೆ.
'ಸಾಲಮೇಳದ ಸಂಗ್ರಾಮ' ಆತ್ಮಕಥೆಯ ಹೆಸರು. ರಾತ್ರಿ ಹಗಲೆನ್ನದೆ ಆತ್ಮಕಥೆಯನ್ನು ಬರೆದು ಮುಗಿಸಿದ್ದೇನೆ. ನೆನಪಿಗೆ ಬಂದ ಎಲ್ಲಾ ವಿಷಯಗಳನ್ನು ನಮೂದಿಸಿದ್ದೇನೆ. ಬಾಲ್ಯದ ಕಷ್ಟ,ಜೀವನದ ಸವಾಲು,ವಕೀಲ ವೃತ್ತಿ ಜೀವನ,ಇಂದಿರಾಗಾಂಧಿ ಜೊತೆ ಒಡನಾಟ,ರಾಜಕೀಯ ಜೀವನದ ಬಗ್ಗೆ ಬರೆದಿದ್ದೇನೆ. ರಾಜಕೀಯ ಏರುಪೇರುಗಳನ್ನೂ ಆತ್ಮಕಥೆಯಲ್ಲಿ ಸೇರಿಸಿದ್ದೇನೆ. ಆತ್ಮಕಥೆಯಲ್ಲಿ ಕುದ್ರೋಳಿ ಸೇರಿದಂತೆ ಬೇರೆ ದೇವಸ್ಥಾನದ ಚರಿತ್ರೆಯನ್ನೂ ಬರೆದಿದ್ದೇನೆ. ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರಿಂದ ಆತ್ಮಕಥೆ ಬಿಡುಗಡೆಗೊಳಿಸುವ ಆಸೆ ಇದೆ. ಆದರೆ ಅವರಿಗೆ ಬಿಡುವು ಇಲ್ಲದ ಕಾರಣ ನಾನೇ ನನ್ನ ಆತ್ಮಕಥೆ ಬಿಡುಗಡೆ ಮಾಡುತ್ತೇನೆ ಎಂದು ಮಂಗಳೂರಿನಲ್ಲಿ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.