
ಬೆಂಗಳೂರು (ಜೂ.13): 150 ಕೋಟಿ ಗಣಿಕಪ್ಪ ಪ್ರಕರಣ ಸಂಬಂಧಪಟ್ಟಂತೆ ಬೆಂಗಳೂರಿನ ಎಸ್ಐಟಿ ಕಚೇರಿಗೆ ದಾಖಲೆಗಳ ಸಮೇತ ಜನಾರ್ದನ ರೆಡ್ಡಿ ಹಾಜರಾಗಿದ್ದಾರೆ.
ಹೆಬ್ಬಾಳದಲ್ಲಿರುವ ಎಸ್ಐಟಿ ಕಚೇರಿಗೆ ಹಾಜರಾದ ಜನಾರ್ದನ್ ರೆಡ್ಡಿ 150 ಕೋಟಿ ರೂ. ಗಣಿ ಕಪ್ಪದ ದಾಖಲೆ ನೀಡಲು ಬಂದಿದ್ದಾರೆ. ಕಳೆದ 2006ರಲ್ಲಿ ನಡೆದ ಜಂತಕಲ್ ಮೈನಿಂಗ್ ಗುತ್ತಿಗೆ ಪ್ರಕರಣದಲ್ಲಿ ಕುಮಾರಸ್ವಾಮಿಯವರಿಗೆ 150 ಕೋಟಿ ಲಂಚ ನೀಡಲಾಗಿದೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಜನಾರ್ದನ ರೆಡ್ಡಿ ಆರೋಪಿಸಿದ್ದರು. ಕುಮಾರಸ್ವಾಮಿ ವಿರುದ್ಧದ ಆರೋಪಕ್ಕೆ ಪೂರಕವಾಗಿ ದಾಖಲೆಗಳನ್ನು ಸಲ್ಲಿಸುವಂತೆ ವಿಶೇಷ ತನಿಖಾ ತಂಡ, ಮಾಜಿ ಸಚಿವ ಜನಾರ್ದನ ರೆಡ್ಡಿಯವರಿಗೆ ಕೋರಿತ್ತು.
ಶೀಘ್ರದಲ್ಲಿಯೇ ಎಸ್ಐಟಿಗೆ ದಾಖಲೆಗಳನ್ನು ಸಲ್ಲಿಸುತ್ತೇನೆ ಎಂದು ಜನಾರ್ದನ ರೆಡ್ಡಿ ಕಾಲಾವಕಾಶ ಕೋರಿದ್ದರು. ಹೀಗಾಗಿ ಇವತ್ತು ಎಸ್ಐಟಿ ಕಚೇರಿಗೆ ದಾಖಲೆಗಳ ಸಮೇತ ಆಗಮಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.