
ಬೆಂಗಳೂರು(ಅ.22): ಆರು ವರ್ಷಗಳ ಬಳಿಕ ಮಾಜಿ ಸಚಿವ ಹಾಗೂ ಗಣಿ ಧಣಿ ಜನಾರ್ಧನ ರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ್ದರು. ತಮ್ಮ ಮಗಳು ಬ್ರಹ್ಮಣಿ ವಿವಾಹದ ಆಹ್ವಾನ ಪತ್ರಿಕೆಯನ್ನು ಮುಖ್ಯಮಂತ್ರಿಗಳಿಗೆ ನೀಡಿದ ಜನಾರ್ಧನ ರೆಡ್ಡಿ ಮದುವೆಗೆ ಕುಟುಂಬ ಸಮೇತ ಬರುವಂತೆ ಸಿಎಂಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಗಳ ಮದುವೆಯ ವಿಡಿಯೂ ತೋರಿಸಿ, ಚಿತ್ರೀಕರಣದ ಬಗ್ಗೆ ಸಿ.ಎಂಗೆ ವಿವರಿಸಿದರು.
ಸಿದ್ದರಾಮಯ್ಯ ಅವರ ಸಿಎಂ ಗಾದಿಗೇರಲು ರೆಡ್ಡಿ ಸಹೋದರರ ವಿರುದ್ಧದ ಬಳ್ಳಾರಿ ಪಾದಯಾತ್ರೆಯು ಪ್ರಮುಖ ಕಾರಣವಾಗಿತ್ತು. ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ರೆಡ್ಡಿ ಸಹೋದರರು ಧೈರ್ಯವಿದ್ದರೆ ಬಳ್ಳಾರಿಗೆ ಬರುವಂತೆ ಆಹ್ವಾನವಿತ್ತಿದ್ದರು. ಇದನ್ನು ಸಿದ್ದರಾಮಯ್ಯ ಸವಾಲಾಗಿ ಸ್ವೀಕರಿಸಿ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಕೈಗೊಂಡು. ರೆಡ್ಡಿ ವಿರುದ್ಧದ ಹೋರಾಟದಲ್ಲಿ ಗೆಲುವು ಸಾಧಿಸಿದ್ದನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.