
ಬೆಂಗಳೂರು (ಜೂ.15): ಮಾಜಿ ಸಚಿವ ಗಾಲಿ ಜನಾರ್ಧನ್ ರೆಡ್ಡಿ ಹಾಗೂ ಸಂಸದ ಶ್ರೀರಾಮುಲು ಇಂದು ಇರುಮಿಡಿ ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳಿದ್ದಾರೆ.
85 ಜನ ಬೆಂಬಲಿಗರೊಂದಿಗೆ ವಿಶೇಷ ವಿಮಾನದಲ್ಲಿ ತೆರಳಿದ ರೆಡ್ಡಿ, ಶ್ರೀರಾಮುಲು ಶಬರಿಮಲೈಗೆ ತೆರಳಿದ್ದಾರೆ. ಕಳೆದ 5 ವರ್ಷಗಳಿಂದ ಇರುಮುಡಿ ಸೇವೆ ಮಾಡುತ್ತಿರುವ ಶ್ರೀರಾಮುಲು, ಈ ಬಾರಿ ಜನಾರ್ಧನ್ ರೆಡ್ಡಿ ಅಯ್ಯಪ್ಪಸ್ವಾಮಿ ಬೆಟ್ಟ ಹತ್ತಲಿದ್ದಾರೆ. ನಾಳೆ ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಕಳೆದ 5 ವರ್ಷಗಳಿಂದ ಇರುಮುಡಿ ಸೇವೆ ಮಾಡಿದ್ದ ಶ್ರೀರಾಮುಲು ಸ್ನೇಹಿತ ಜನಾರ್ಧನ ರೆಡ್ಡಿ ಅವ್ರಿಗೂ ಇರುಮುಡಿ ಸೇವೆ ಮಾಡಲು ಸಲಹೆ ನೀಡಿದ್ದಾರೆ. ಇದೇ ವೇಳೆ ಜನರ ಒಳಿತಿಗಾಗಿ ನಾನು ಪ್ರತಿವರ್ಷ ಇರಮುಡಿ ಹೊತ್ತು ಅಯ್ಯಪ್ಪನ ದರ್ಶನ ಮಾಡುತ್ತೇನೆ ಎಂದು ಜನಾರ್ಧನ್ ರೆಡ್ಡಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.