ಆಸ್ತಿ ಹಿಂದಿರುಗಿಸದಿದ್ದರೆ ಕೇಸ್ : EDಗೇ ಎಚ್ಚರಿಸಿದ ರೆಡ್ಡಿ

Published : Jul 04, 2019, 09:59 AM ISTUpdated : Jul 04, 2019, 10:27 AM IST
ಆಸ್ತಿ ಹಿಂದಿರುಗಿಸದಿದ್ದರೆ ಕೇಸ್ : EDಗೇ ಎಚ್ಚರಿಸಿದ ರೆಡ್ಡಿ

ಸಾರಾಂಶ

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಎಚ್ಚರಿಕೆಯೊಂದನ್ನು ರವಾನಿಸಿದ್ದಾರೆ. ಆಸ್ತಿ ಹಿಂದಿರುಗಿಸದಿದ್ದಲ್ಲಿ ಕೇಸ್ ದಾಖಲಿಸುವುದಾಗಿ ಹೇಳಿದ್ದಾರೆ. 

ಬೆಂಗಳೂರು [ಜು.04] :  ಆ್ಯಂಬಿಡೆಂಟ್‌ ಬಹುಕೋಟಿ ವಂಚನೆ ಪ್ರಕರಣ ಮತ್ತು ಓಬಳಾಪುರಂ ಮೈನಿಂಗ್‌ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದರು.

ಶಾಂತಿನಗರದಲ್ಲಿನ ಇಡಿ ಕಚೇರಿಗೆ ಮಧ್ಯಾಹ್ನ 3ಗಂಟೆ ಸುಮಾರಿಗೆ ತೆರಳಿದ ಜನಾರ್ದನ ರೆಡ್ಡಿ ಸುಮಾರು ನಾಲ್ಕು ತಾಸುಗಳ ಕಾಲ ವಿಚಾರಣೆಗೊಳಗಾದರು. ಇಡಿ ಅಧಿಕಾರಿಗಳು ಸಮನ್ಸ್‌ ಜಾರಿ ಮಾಡಿದ್ದರಿಂದ ಜನಾರ್ದನ ರೆಡ್ಡಿ ವಿಚಾರಣೆಗೆ ಹಾಜರಾದರು. ಆ್ಯಂಬಿಡೆಂಟ್‌ ಬಹುಕೋಟಿ ವಂಚನೆ ಪ್ರಕರಣ ಮತ್ತು ಓಬಳಾಪುರಂ ಮೈನಿಂಗ್‌ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧಿಸಿದಂತೆ ಹಲವು ಮಹತ್ವದ ಮಾಹಿತಿಯನ್ನು ಇಡಿ ಅಧಿಕಾರಿಗಳು ಪಡೆದುಕೊಂಡರು ಎಂದು ಹೇಳಲಾಗಿದೆ.

ವಿಚಾರಣೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಜನಾರ್ದನ ರೆಡ್ಡಿ, ಓಬಳಾಪುರಂ ಮೈನಿಂಗ್‌ ಕಂಪನಿಯ ಪ್ರಕರಣ ಸಂಬಂಧ ವಿಚಾರಣೆ ನಡೆಯಿತು. ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಕೆಲವು ದಾಖಲೆ ಹಾಗೂ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಅದನ್ನು ಹಿಂದಿರುಗಿಸುವಂತೆ ಸುಪ್ರೀಂಕೋರ್ಟ್‌ ಆದೇಶಿಸಿದೆ. ಇದಕ್ಕಾಗಿ ಕಾನೂನು ಹೋರಾಟ ನಡೆಸಲಾಗಿದೆ. ಆಸ್ತಿಯನ್ನು ಬಿಡುಗಡೆ ಮಾಡದಿದ್ದಲ್ಲಿ ಇಡಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.

ಆ್ಯಂಬಿಡೆಂಟ್‌ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಇಡಿ ಅಧಿಕಾರಿಗಳು ಈಗಾಗಲೇ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ವಿಚಾರಣೆ ಹೊಸದೇನಲ್ಲ. ಆಗಾಗ್ಗೆ ವಿಚಾರಣೆಗೆ ಬರುತ್ತಿರುತ್ತೇನೆ. ಮಾಧ್ಯಮಗಳಿಗೆ ಇವತ್ತು ಕಂಡಿದ್ದೇನೆ ಅಷ್ಟೆಎಂದ ಅವರು, ರಾಜಕೀಯ ಕುರಿತು ಮಾತನಾಡಲು ನಿರಾಕರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡೆವಿಲ್ ಇನ್ ಟ್ರಬಲ್: ನಟ ದರ್ಶನ್‌ನಿಂದ ಒಂದು ಗನ್ ಕಿತ್ತುಕೊಂಡರೂ ಮತ್ತೊಂದು .22mm ರೈಫಲ್ ಮರೆತ ಪೊಲೀಸರು
Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!