
ಜಾರ್ಖಂಡ್(ಡಿ. 30): ಕಲ್ಲಿದ್ದಲು ಗಣಿಗಾರಿಕೆ ನಡೆಯುವ ವೇಳೆ ಮಣ್ಣು ಕುಸಿದು ಏಳಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ. ಈ ಗಣಿಕುಸಿತದಲ್ಲಿ ಇನ್ನೂ 40ಕ್ಕೂ ಹೆಚ್ಚು ಜನರು ಮಣ್ಣಿನ ರಾಶಿಯಡಿ ಸಿಲುಕಿದ್ದಾರೆ. ಇಲ್ಲಿಯ ಗೋಡ್ಡಾ ಜಿಲ್ಲೆಯ ಲಾತ್ಮಾಟಿಯಾ ಗಣಿ ಬಳಿ ಈ ದುರಂತ ಸಂಭವಿಸಿದ್ದು, ರಕ್ಷಣಾ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದೆ. ಗಣಿದುರಂತಕ್ಕೆ ತುತ್ತಾಗಿದವರು ಈಸ್ಟರ್ನ್ ಕೋಲ್'ಫೀಲ್ಡ್ಸ್ ಲಿಮಿಟೆಡ್(ಇಸಿಎಲ್) ಎಂಬ ಖಾಸಗಿ ಗಣಿಗಾರಿಕೆ ಸಂಸ್ಥೆಯ ಕಾರ್ಮಿಕರೆನ್ನಲಾಗಿದೆ. ಆದರೆ, ಕೆಲ ವರದಿಗಳ ಪ್ರಕಾರ, ಗಣಿ ಕುಸಿತ ಸಂಭವಿಸಿದ ಸಮಯದಲ್ಲಿ ಎಷ್ಟು ಕಾರ್ಮಿಕರಿದ್ದರು ಎಂಬ ಬಗ್ಗೆ ಖಚಿತ ಮಾಹಿತಿ ಸಿಕ್ಕಿಲ್ಲ. ಸುಮಾರು 40-50 ಜನರು ಇದ್ದಿರಬಹುದೆಂದು ಅಂದಾಜಿಸಲಾಗಿದೆ. ಕಾರ್ಮಿಕರ ಜೊತೆಗೆ ಹಲವು ಸಲಕರಣೆಗಳು ಹಾಗೂ ವಾಹನಗಳೂ ಮಣ್ಣಿನಡಿ ಸಿಲುಕಿವೆಯೆನ್ನಲಾಗಿದೆ.
ನಿನ್ನೆ ರಾತ್ರಿಯೇ ದುರಂತ ಸಂಭವಿಸಿದ್ದರೂ ತೀವ್ರ ಮಂಜಿನ ಕಾರಣ ರಕ್ಷಣಾ ಕಾರ್ಯ ಶುರುವಾಗುವುದು ವಿಳಂಬವಾಯಿತೆನ್ನಲಾಗಿದೆ. ಪಾಟ್ನಾದಿಂದ ಎನ್'ಡಿಆರ್'ಎಫ್'ನ ತಂಡಗಳು ಮಧ್ಯಾಹ್ನ ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ಕೈಜೋಡಿಸಿವೆ. ಆದರೆ, ಈವರೆಗೆ ಒಬ್ಬೇ ಒಬ್ಬ ವ್ಯಕ್ತಿ ಜೀವಂತವಾಗಿ ಸಿಕ್ಕಿರುವ ಬಗ್ಗೆ ಮಾಹಿತಿ ಬಂದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.