
ನವದೆಹಲಿ(ಅ.06): ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಖಾತೆ ಬದಲಾಯಿಸುವ ಸಾಧ್ಯಯಿದೆ ಎಂದು ಕಾಂಗ್ರೆಸ್ ಪಕ್ಷದ ಉಸ್ತುವಾರಿಯಲ್ಲಿರುವ ‘ನ್ಯಾಷನಲ್ ಹೆರಾಲ್ಡ್’ ವೆಬ್ಸೈಟ್ ವರದಿ ಮಾಡಿದೆ.
ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಹಣಕಾಸು ಸಚಿವ ಅರುಣ್ ಜೇಟ್ಲಿ ದಿಢೀರ್ ಸಭೆ ನಡೆಸಿದ್ದರು. ಈ ಸಭೆಯ ಬಳಿಕ ಮೋದಿ ಮತ್ತು ಅಮಿತ್ ಶಾ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಖಾತೆ ಬದಲಾವಣೆ ಕುರಿತು ಚರ್ಚೆ ನಡೆಸಲಾಯಿತು ಎಂದು ವೆಬ್ಸೈಟ್ ವರದಿ ಮಾಡಿದೆ.
ಜೇಟ್ಲಿ ಅವರನ್ನು ಹಣಕಾಸು ಖಾತೆಯಿಂದ ಗೃಹ ಖಾತೆ ವರ್ಗಾಯಿಸುವ ಸಾಧ್ಯತೆ ಇದೆ. ಹಾಲಿ ಗೃಹ ಸಚಿವ ರಾಜ್'ನಾಥ್ ಸಿಂಗ್ ಅವರನ್ನು ಉಪಪ್ರಧಾನಿ ಮಾಡುವ ಸಾಧ್ಯತೆ ಇದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.