
ಜೈಪುರ್(ಆ.11): ಗೋಮಾಂಸ ಮತ್ತು ಹಂದಿ ಮಾಂಸ ತಿನ್ನುತ್ತಿದ್ದ ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಪಂಡಿತ್ ಆಗಲು ಸಾಧ್ಯವೇ ಇಲ್ಲ ಎಂದು ರಾಜಸ್ಥಾನ ಬಿಜೆಪಿ ಶಾಸಕ ಜ್ಞಾನ್ ದೇವ್ ಅಹುಜಾ ಹೇಳಿದ್ದಾರೆ.
ನೆಹರೂ ಅವರನ್ನು ಯಾರಾದರೂ ಪಂಡಿತ್ ಎಂದು ನಂಬಿದ್ದರೆ ಅದು ಅವರ ಮೂರ್ಖತನ ಎಂದಿರುವ ಅಹುಜಾ, ಗೋಮಾಂಸ ಮತ್ತು ಹಂದಿ ಮಾಂಸ ತಿನ್ನುವವರು ಪಂಡಿತ್ ಆಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಕೇವಲ ಮತಕ್ಕಾಗಿ ಕಾಂಗ್ರೆಸ್ ನೆಹರೂ ಅವರ ಹೆಸರಿನ ಮುಂದೆ ಪಂಡಿತ್ ಎಂದು ಸೇರಿಸಿದೆ ಎಂದಿರುವ ಅಹುಜಾ, ಮತಕ್ಕಾಗಿ ಕಾಂಗ್ರೆಸ್ ಈ ದೇಶದ ಅತ್ಯಂತ ಸನಾತನ ಮತ್ತು ಸಭ್ಯ ಜಾತಿಯ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಹರಿಹಾಯ್ದಿದ್ದಾರೆ.
ಅಲ್ವರ್ ನ ಬಿಜೆಪಿ ಶಾಸಕ ಜ್ಞಾನ್ ದೇವ್ ಅಹುಜಾ ವಿವಾದಾತ್ಮಕ ಹೇಳಿಕೆ ನೀಡುವುದರಲ್ಲಿ ನಿಸ್ಸೀಮರಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ದವೂ ಹಲವಾರು ಬಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇನ್ನು ಅಹುಜಾ ಹೇಳಿಕೆಯನ್ನು ಖಂಡಿಸಿರುವ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲೆಟ್, ತಮ್ಮ ಕ್ಷೇತ್ರದ ಸಮಸ್ಯೆಗಳತ್ತ ಗಮನಹಿರುಸವ ಬದಲು ಅಹುಜಾ ಬೇಡದ ಸಂಗತಿಗಳ ಕುರಿತು ಮಾತನಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.