
ನವದೆಹಲಿ (ಸೆ.01): ಶ್ರೀನಗರದ ಪಂಥಾ ಚೌಕ್’ನಲ್ಲಿ ಲಷ್ಕರೆ ತೊಯ್ಬಾ ಉಗ್ರಗಾಮಿಗಳು ಭಾರತೀಯ ಸೈನಿಕರ ಮೇಲೆ ಗುಂಡು ಹಾರಿಸಿದ್ದು, ಒಬ್ಬ ಯೋಧ ಮೃತಪಟ್ಟಿದ್ದು, ಐವರು ಯೋಧರು ಗಾಯಗೊಂಡಿದ್ದಾರೆ.
ಇನ್ನೊಂದು ಕಡೆ ಕಾಶ್ಮೀರ ಗಡಿ ರೇಖೆಯಲ್ಲಿ ಪಾಕ್ ಸೇನೆ ಹಾರಿಸಿದ ಗುಂಡಿಗೆ ಬಿಎಸ್’ಎಫ್ ಸಬ್-ಇನ್ಸ್’ಪೆಕ್ಟರ್ ಬಲಿಯಾಗಿದ್ದಾರೆ.
ಪಂಥಾ ಚೌಕ್’ನಲ್ಲಿ ಸೇನಾ ವಾಹನದ ಮೇಲೆ ಉಗ್ರಗಾಮಿಗಳು ಗುಂಡು ಹಾರಿಸಿದ್ದಾರೆ. ಲಷ್ಕರೆ ತೊಯ್ಬಾ ಘಟನೆಯ ಜವಾಬ್ದಾರಿ ಹೊತ್ತುಕೊಳ್ಳುವುದಾಗಿ ಹೇಳಿದೆ. ಭದ್ರತಾ ಪಡೆಗಳು ಬಿಗಿ ಭದ್ರತೆ ಒದಗಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.