
ಚೆನ್ನೈ (ಡಿ.04): ನಿನ್ನೆ ಸಂಜೆ ಹೃದಯಾಘಾತಕ್ಕೊಳಗಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಾಲಲಿತಾ ಆರೋಗ್ಯ ಸ್ಥಿತಿ ಗಂಭೀರವಾಗಿದೆಯೆಂದು ಅಪೊಲೋ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.
ಜಯಾಲಲಿತಾ ಆರೋಗ್ಯ ಪರಿಸ್ಥಿತಿ ತೀರಾ ಗಂಭೀರವಾಗಿದೆ, ಜೀವರಕ್ಷಕ ಸಾಧನಗಳ ಮೂಲಕ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಜ್ಞ ವೈದ್ಯರ ತಂಡ ತಪಾಸಣೆ ನಡೆಸುತ್ತಿದ್ದಾರೆ, ಎಂದು ಅಪೊಲೋ ಆಸ್ಪತ್ರೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಹೇಳಲಾಗಿದೆ.
ಕಳೆದ ಎರಡು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡು ಮುಖ್ಯಮಂತ್ರಿ ಜಯಾಲಲಿತಾ ಅವರಿಗೆ ನಿನ್ನೆ ಸಂಜೆ ಹೃದಯಘಾತವಾಗಿದೆ.
ತೀವ್ರ ಜ್ವರ ಹಾಗೂ ನಿರ್ಜಲೀಕರಣ ಟಾದ ಹಿನ್ನೆಯಲ್ಲಿ ಜಯಾ ಅವರು ಸೆ.22ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಏಮ್ಸ್ ಹಾಗೂ ಲಂಡನ್’ನ ತಜ್ಞ ವೈದ್ಯರನ್ನೊಳಗೊಂಡ ತಂಡವು ಅವರಿಗೆ ಚಿಕಿತ್ಸೆ ನೀಡುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.