
ಚೆನ್ನೈ (ಅ.01): ಕಳೆದ ಒಂದು ವಾರದಿಂದ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಸಿಎಂ ಜಯಲಲಿತಾ ಆರೋಗ್ಯವನ್ನು ಇಂಗ್ಲೆಂಡ್ ನ ವಿಶೇಷ ವೈದ್ಯರ ತಂಡ ನೋಡಿಕೊಳ್ಳುತ್ತಿದೆ ಎಂದು ಅವರ ಪಕ್ಷ ಹೇಳಿದೆ.
ಜಯಲಲಿತಾ ಆರೋಗ್ಯದ ಬಗ್ಗೆ ಹರಡುತ್ತಿರುವ ವದಂತಿಗಳನ್ನು ತಳ್ಳಿ ಹಾಕಿದ ಎಐಎಡಿಎಂಕೆ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದಿದೆ.
ಜಯಲಲಿತಾರವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಆಸ್ಪತ್ರೆಯಿಂದ ಬೇಗ ಬಿಡುಗಡೆಯಾಗುವ ನಿರೀಕ್ಷೆಯಿದೆ. ಜಯಲಲಿತಾ ಫೋಟೋ ಬಿಡುಗಡೆ ಮಾಡುವ ಅಗತ್ಯವಿಲ್ಲ. ನಾವು ಜನರ ಪ್ರಶ್ನೆಗಳಿಗೆ ಮಾತ್ರ ಜವಾಬ್ದಾರರು, ಪ್ರತಿಪಕ್ಷಗಳಿಗಲ್ಲ ಎಂದು ಎಐಎಡಿಎಂಕೆ ವಕ್ತಾರ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.