
ಬೆಂಗಳೂರು(ಸೆ.09): ಕಾವೇರಿಗಾಗಿ ಕರ್ನಾಟಕದಾದ್ಯಂತ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದೆ. ರಾಜ್ಯ ಹೊತ್ತಿ ಉರಿಯುತ್ತಿದೆ. ಆದರೆ ತಮಿಳುನಾಡು ಮಾತ್ರ ಮತ್ತೆ ನೀರು ಬೇಕೆಂದು ಕ್ಯಾತೆ ತೆಗೆದಿದೆ.
ಈಗ ಬಿಟ್ಟಿರುವ 13 ಟಿಎಂಸಿ ನೀರು ಸಾಲೋದಿಲ್ಲ, ಬಾಕಿ ಉಳಿದಿರುವ 61 ಟಿಎಂಸಿ ನೀರು ಬೇಕೆಂದು ತಮಿಳುನಾಡು ಮುಖ್ಯಕಾರ್ಯದರ್ಶಿಯಿಂದ ಇ ಮೇಲ್ ಮೂಲಕ ಕಾವೇರಿ ಮೇಲುಸ್ತುವಾರಿ ಸಮಿತಿಗೆ ಜಯಲಲಿತಾ ಅರ್ಜಿ ಸಲ್ಲಿಸಿದ್ದಾರೆ. ಇದು ಸೆ.12ಕ್ಕೆ ನಡೆಯಲಿರುವ ಮೇಲುಸ್ತುವಾರಿ ಸಮಿತಿ ಸಭೆಗೆ ಒತ್ತಡ ತರುವ ತಂತ್ರವಾಗಿದೆ. ಇವರ ಈ ಬೇಡಿಕೆಯಿಂದ ಕರ್ನಾಟಕ ಇನ್ನಷ್ಟು ಸಂಕಷ್ಟಕ್ಕೆ ತುತ್ತಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.