ಜಯಲಲಿತಾ ಸಂಪೂರ್ಣ ಚೇತರಿಕೆ

Published : Nov 12, 2016, 01:23 PM ISTUpdated : Apr 11, 2018, 12:39 PM IST
ಜಯಲಲಿತಾ ಸಂಪೂರ್ಣ ಚೇತರಿಕೆ

ಸಾರಾಂಶ

ಕಳೆದ ಸೆಪ್ಟೆಂಬರ್ 22 ರಂದು ತೀವ್ರ ಉಸಿರಾಟದ ತೊಂದರೆ ಮತ್ತು ನಿರ್ಜಲೀಕರಣ ಸಮಸ್ಯೆಯಿಂದ ಚೆನ್ನೈ ಅಪೋಲೊ ಆಸ್ಪತ್ರೆಗೆ ಅಮ್ಮಾ ದಾಖಲಾಗಿದ್ದರು.

ಚೆನ್ನೈ(ನ.12): ತಮಿಳುನಾಡು ಸಿಎಂ ಜಯಲಲಿತಾ ಅವರ ಆರೋಗ್ಯ ಸಂಪೂರ್ಣ ಸುಧಾರಣೆಗೊಂಡಿದೆ, ಅವರು ಇಷ್ಟ ಪಟ್ಟರೆ  ಮನೆಗೆ ಹೋಗಬಹುದು ಎಂದು ಅಪೋಲೊ ಆಸ್ಪತ್ರೆ ನಿರ್ದೇಶಕ ಪ್ರತಾಪ್ ರೆಡ್ಡಿ  ಸ್ಪಷ್ಟಪಡಿಸಿದ್ದಾರೆ. ಕಳೆದ ಸೆಪ್ಟೆಂಬರ್ 22 ರಂದು ತೀವ್ರ ಉಸಿರಾಟದ ತೊಂದರೆ ಮತ್ತು ನಿರ್ಜಲೀಕರಣ ಸಮಸ್ಯೆಯಿಂದ ಚೆನ್ನೈ ಅಪೋಲೊ ಆಸ್ಪತ್ರೆಗೆ ಅಮ್ಮಾ ದಾಖಲಾಗಿದ್ದರು. ನಂತರ ಅವರ ಶ್ವಾಸಕೋಶದ ಸೋಂಕು ಸಮಸ್ಯೆ ಕಾಣಿಸಿಕೊಂಡ ಕಾರಣಕ್ಕೆ ಅವರನ್ನು  ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಸತತ 50 ದಿನಗಳ ಚಿಕಿತ್ಸೆ ನಂತರ ಜಯಲಲಿತಾರ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಾಣಿಸಿಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಸ್ಪತ್ರೆ ನಿರ್ದೇಶಕ ಪ್ರತಾಪ್ ರೆಡ್ಡಿ ಜಯಲಲಿತಾ ಅವರು ಸಂಪೂರ್ಣ ಗುಣಮುಖರಾಗಿದ್ದು, ಡಿಸ್ಚಾರ್ಜ್ ಆಗುವ ನಿರ್ಧಾರ ತೆಗೆದುಕೊಳ್ಳಲು ಅವರಿಗೆ ಬಿಡಲಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ಜಯಲಲಿತಾ ಅವರಿಗೆ ತುರ್ತು ನಿಗಾ ಘಟಕದಿಂದ ಖಾಸಗಿ ಕೋಣೆಗೆ ಸ್ಥಳಾಂತರಿಸಲಾಗಿದೆ. ಅಷ್ಟೇ ಅಲ್ಲದೇ  ಅವರ ಶ್ವಾಸಕೋಶದ ಸೋಂಕು ಸಮಸ್ಯೆ ಕೂಡ ಸಂಪೂರ್ಣವಾಗಿ ನಿಯಂತ್ರಣದಲ್ಲಿದ್ದು, ಜಯಲಲಿತಾ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಮನೂರು ಶಿವಶಂಕರಪ್ಪ ನಿಧನ: ಇಂದು ಕಲಾಪ ಮುಂದೂಡುವ ಸಾಧ್ಯತೆ
ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!