
ಚೆನ್ನೈ(ಜ.09): ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ಹೆಸರನ್ನು ನೊಬೆಲ್ ಪ್ರಶಸ್ತಿಗೆ ಶಿಫಾರಸು ಮಾಡಬೇಕು ಎಂದು ಎಐಎಡಿಎಂಕೆ ಹಿರಿಯ ನಾಯಕ ಹಾಗೂ ತಮಿಳುನಾಡು ವಿಧಾನಸಭೆ ಉಪಾಧ್ಯಕ್ಷ ವಿ. ಜಯರಾಮನ್ ಆಗ್ರಹಿಸಿದರು. ವಿಧಾನಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಜಯಲಲಿತಾ 1992ರಲ್ಲಿ ತೊಟ್ಟಿಲು ಯೋಜನೆಯನ್ನು ತಾಯಿ-ಮಗುವಿಗೋಸ್ಕರ ಆರಂಭಿಸಿದರು.
ಈ ಯೋಜನೆಯನ್ನು ನೊಬೆಲ್ ವಿಜೇತೆ ಮದರ್ ತೆರೇಸಾ ಅವರೂ ಪ್ರಶಂಸಿಸಿದ್ದರು. ಇದರಿಂದ ಲಿಂಗ ಅಸಮಾನತೆ ಪ್ರಮಾಣ ಕುಸಿಯಿತು. ಹೆಣ್ಣು ಭ್ರೂಣ ಹತ್ಯೆ ನಿಯಂತ್ರಣಕ್ಕೆ ಬಂದಿತು. ಹೀಗಾಗಿ ಜಯಾಗೆ ನೊಬೆಲ್ ಕೊಡಬೇಕು’ ಎಂದು ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.