
ಚೆನ್ನೈ(ಫೆ.24): ಇವತ್ತು ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾರವರ 69ನೇ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಅಮ್ಮಾ ಸಮಾಧಿಗೆ ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ. ಎಐಎಡಿಎಂಕೆ ಕಾರ್ಯಕರ್ತರು, ಅಭಿಮಾನಿಗಳು ಮರೀನಾ ಬೀಚ್ ಬಳಿ ಇರುವ ಅಮ್ಮಾ ಸಮಾಧಿಗೆ ತೆರಳಿ ನಮನ ಸಲ್ಲಿಸಿದ್ದಾರೆ. ಅಲ್ಲದೇ ರಾಜಕಾರಣಿಗಳು, ಚಿತ್ರ ನಟ-ನಟಿಯರು ಜಯಲಲಿತಾರವರ ಸಮಾಧಿಗೆ ತೆರಳಿ ಪುಷ್ಪಗುಚ್ಚ ಸಲ್ಲಿಸಿದ್ದಾರೆ.
ಇನ್ನು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಸೊಸೆ ದೀಪಾ ಜಯಕುಮಾರ್ ತಾವು ಈ ಹಿಂದೆ ಹೇಳಿದಂತೆ ನೂತನ ಪಕ್ಷಕ್ಕೆ ಜಯಲಲಿತಾ ಅವರ ಹುಟ್ಟುಹಬ್ಬದ ದಿನ ಇಂದು ರಂದು ಚಾಲನೆ ನೀಡಲಿದ್ದಾರೆ. ತಮ್ಮ ಮನೆಯಲ್ಲಿ ಇಂದು ತಮ್ಮ ಪಕ್ಷದ ಕಚೇರಿ ಉದ್ಘಾಟಿಸಿ ಸಂಜೆ ವೇಲೆ ನೂತನ ಪಕ್ಷದ ಹೆಸರು ಪ್ರಕಟಿಸಿರುವುದಾಗಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.