ಜಯಲಲಿತಾಗೆ ಸೇರಿದ ಟೀ ಎಸ್ಟೇಟ್‌ನಲ್ಲಿ ನಿಗೂಢತೆ !: ಅನುಮಾನಾಸ್ಪದವಾಗಿ ಸಾವನ್ನಪ್ಪುತ್ತಿದ್ದಾರೆ ‘ಅಮ್ಮ’ನ ಜೊತೆಗಾರರು!

Published : Jul 04, 2017, 12:10 PM ISTUpdated : Apr 11, 2018, 12:46 PM IST
ಜಯಲಲಿತಾಗೆ ಸೇರಿದ ಟೀ ಎಸ್ಟೇಟ್‌ನಲ್ಲಿ ನಿಗೂಢತೆ !: ಅನುಮಾನಾಸ್ಪದವಾಗಿ ಸಾವನ್ನಪ್ಪುತ್ತಿದ್ದಾರೆ ‘ಅಮ್ಮ’ನ ಜೊತೆಗಾರರು!

ಸಾರಾಂಶ

ತಮಿಳುನಾಡು ಮಾಜಿ ಸಿಎಂ, ದಿವಂಗತ ಜಯಲಲಿತಾಗೆ ಸೇರಿದ ಟೀ ಎಸ್ಟೇಟ್‌'ನಲ್ಲಿ ಮತ್ತೆ ಮತ್ತೆ ನಿಗೂಢತೆ ನಡೆಯುತ್ತಿದೆ. ಇದ್ದಕ್ಕಿದ್ದಂತೆ ಎಸ್ಟೇಟ್‌'ನ ಅಕೌಂಟೆಂಟ್‌ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು ಅನುಮಾನ ಹುಟ್ಟುಹಾಕಿದೆ

ಚೆನ್ನೈ(ಜು.04): ತಮಿಳುನಾಡು ಮಾಜಿ ಸಿಎಂ, ದಿವಂಗತ ಜಯಲಲಿತಾಗೆ ಸೇರಿದ ಟೀ ಎಸ್ಟೇಟ್‌'ನಲ್ಲಿ ಮತ್ತೆ ಮತ್ತೆ ನಿಗೂಢತೆ ನಡೆಯುತ್ತಿದೆ. ಇದ್ದಕ್ಕಿದ್ದಂತೆ ಎಸ್ಟೇಟ್‌'ನ ಅಕೌಂಟೆಂಟ್‌ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು ಅನುಮಾನ ಹುಟ್ಟುಹಾಕಿದೆ.

ಊಟಿಯಲ್ಲಿರುವ ಕೊಡನಾಡ್‌ ಎಸ್ಟೇಟ್‌'ನ ಅಕೌಂಟೆಂಟ್‌ ದಿನೇಶ್ ಕುಮಾರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಇನ್ನು ಕಳೆದ ಏಪ್ರಿಲ್‌'ನ 24ರಂದು ಇದೇ ಎಸ್ಟೇಟ್‌'ನ ಸೆಕ್ಯೂರಿಟಿ ಗಾರ್ಡ್‌ನನ್ನು ಗ್ಯಾಂಗ್‌ವೊಂದು ಕೊಲೆಗೈದಿತ್ತು. ಇದಾದ ಬಳಿಕ ಕೊಲೆ ಪ್ರಕರಣದ ಶಂಕಿತ ಆರೋಪಿಯೋರ್ವ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ. ಅಷ್ಟೇ ಅಲ್ಲ ಮತ್ತೋರ್ವ ಶಂಕಿತ ಆರೋಪಿ ಕೂಡ ರಸ್ತೆ ಅಪಘಾತಕ್ಕೆ ಗುರಿಯಾಗಿದ್ದ.

ಜಯಲಲಿತಾ ಕಾರು ಡ್ರೈವರ್‌ ಕೂಡಾ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ. ಇದೀಗ ಎಸ್ಟೇಟ್‌'ನ ಅಕೌಂಟೆಂಟ್​'ನ ಅನುಮಾನಾಸ್ಪದ ಸಾವು ಅನುಮಾನಕ್ಕೆ ಎಡೆಮಾಡಿದೆ. ಒಟ್ಟಾರೆ ಜಯಲಲಿತಾ ಸಾವಿನ ಬಳಿಕ ಅವರ ಜೊತೆಗಿದ್ದವರು ಒಬ್ಬೊಬ್ಬರಾಗೇ ಸಾವಿನ ಮನೆ ಸೇರುತ್ತಿದ್ದು ಆಸ್ತಿ ಕಬಳಿಸಲು ಹುನ್ನಾರ ನಡೀತಿದೆಯಾ? ಅನ್ನೋ ಶಂಕೆ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಏಷ್ಯಾನೆಟ್ ಕನ್ನಡಪ್ರಭ ಸುವರ್ಣ ನ್ಯೂಸ್ ವತಿಯಿಂದ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ
ಉತ್ತರ ಕನ್ನಡ: ಯುವಜನತೆಯಲ್ಲಿ ಹೆಚ್ಚುತ್ತಿದೆ ಹೆಚ್‌ಐವಿ ಸೋಂಕು, ಜೆನ್ ಝೀ ಕಿಡ್‌ ಗಳಲ್ಲೇ ಅತೀ ಹೆಚ್ಚು!