
ಬೆಂಗಳೂರು(ಫೆ.08): ವಿಧಾನಸಭಾ ಚುನಾವಣೆ ಹಿನ್ನೆಲೆ ದಲಿತರ ಮತ ಸೆಳೆಯಲು ಜೆಡಿಎಸ್ ತಂತ್ರ ರೂಪಿಸಿದ್ದು ಬಿಎಸ್’ಪಿ ಜೊತೆ ಮೈತ್ರಿಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮುಂದಾಗಿದ್ದಾರೆ.
ಈ ಬಗ್ಗೆ ಜೆಡಿಎಸ್’ನ ಡ್ಯಾನಿಷ್ ಅಲಿ, ಬಿಎಸ್’ಪಿ ಸತೀಶ್ ಚಂದ್ರ ಮಿಶ್ರಾ ಜಂಟಿ ಸುದ್ದಿಗೋಷ್ಠಿ ನಡೆಸಿ ಫೆಬ್ರವರಿ 17ರಿಂದ ಕರ್ನಾಟಕದಲ್ಲಿ ಬಿಎಸ್’ಪಿ ಅಧ್ಯಕ್ಷೆ ಮಾಯಾವತಿ ಅವರು ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಯದ 224ರ ಪೈಕಿ 20 ಕ್ಷೇತ್ರಗಳಲ್ಲಿ ಬಿಎಸ್’ಪಿ ಬೆಂಬಲಿಸಲಿದ್ದು,ಒಕ್ಕಲಿಗ ಮತಗಳ ಜತೆಗೆ ದಲಿತ ಮತಗಳನ್ನು ಸೆಳೆಯುವುದಕ್ಕೆ ಈ ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.
--
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.