
ಬೆಂಗಳೂರು(ಮೇ.20): ನಿನ್ನೆ ಲಗ್ಗೆರೆಯಲ್ಲಿ ಪಾಲಿಕೆ ಸದಸ್ಯೆ ಮಂಜುಳಾ ಮೇಲೆ ನಡೆದ ಹಲ್ಲೆಗೆ ಜೆಡಿಎಸ್ ಪಕ್ಷ ತೀವ್ರ ವಿರೋಧ ವ್ಯಕ್ತವಾಗಿದೆ.
ಈ ಘಟನೆಯಿಂದ ಜೆಡಿಎಸ್ ಪಕ್ಷದ ಪಾಲಿಕೆ ಸದಸ್ಯರು ಕಾಂಗ್ರೆಸ್ ಪಕ್ಷದ ಮೇಲೆ ಗರಂ ಆಗಿದ್ದು, ಕಾಂಗ್ರೆಸ್ ಜತೆ ಮೈತ್ರಿ ಕಳೆದುಕೊಳ್ಳುವ ಮಾತನಾಡುತ್ತಿದ್ದಾರೆ. ಶಾಸಕ ಮುನಿರತ್ನಂ ಬೆಂಬಲಿಗರು ಪಾಲಿಕೆ ಸದಸ್ಯೆ ಮಂಜುಳಾ ಮೇಲೆ ನಡೆಸಿದ್ದರು. ಇದರ ಮುಂದುವರಿದ ಭಾಗವಾಗಿ ಶನಿವಾರ ವಿಧಾನ ಪರಿಷತ್ ಸದಸ್ಯ ಶರವಣ ನೇತೃತ್ವದಲ್ಲಿ ಬಿಬಿಎಂಪಿ ಕಚೇರಿಯಲ್ಲಿ ಜೆಡಿಎಸ್ ಪಾಲಿಕೆ ಸದಸ್ಯ ಸಭೆ ನಡೆಸಿದರು.ಈ ಸಭೆಯಲ್ಲಿ ಶಾಸಕ ಮುನಿರತ್ನ ನಡೆಗೆ ಜೆಡಿಎಸ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ವಿಚಾರವಾಗಿ ಶಾಸಕ ಮುನಿರತ್ನಂ ಕ್ಷಮೆ ಕೇಳದಿದ್ದರೆ ಮುಂಬರುವ ದಿನಗಳಲ್ಲಿ ಬಿಬಿಎಂಪಿ ಮೈತ್ರಿ ಕಳೆದುಕೊಳ್ಳುವ ಎಚ್ಚರಿಕೆ ಮಾತನಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.