ಚುನಾವಣೆ : ಆರು ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ

Published : Mar 10, 2018, 08:44 AM ISTUpdated : Apr 11, 2018, 12:39 PM IST
ಚುನಾವಣೆ : ಆರು ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಸಾರಾಂಶ

ಜೂನ್‌ನಲ್ಲಿ ನಡೆಯಲಿರುವ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರದ ವಿಧಾನಪರಿಷತ್‌ನ ಆರು ಸ್ಥಾನಗಳಿಗೆ ಜೆಡಿಎಸ್‌ ಪಕ್ಷವು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

ಬೆಂಗಳೂರು: ಜೂನ್‌ನಲ್ಲಿ ನಡೆಯಲಿರುವ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರದ ವಿಧಾನಪರಿಷತ್‌ನ ಆರು ಸ್ಥಾನಗಳಿಗೆ ಜೆಡಿಎಸ್‌ ಪಕ್ಷವು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಉಪಸಭಾಪತಿ ಮರಿತಿಬ್ಬೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ರಮೇಶ್‌ ಬಾಬು, ನೈಋುತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್‌.ಎಲ್‌. ಭೋಜೇಗೌಡ ಅವರನ್ನು ಪಕ್ಷದ ಅಧಿಕೃತ ಅಭ್ಯರ್ಥಿಗಳೆಂದು ಘೋಷಣೆ ಮಾಡಲಾಗಿದೆ. ಬೆಂಗಳೂರು ಪದವೀಧರ ಕ್ಷೇತ್ರದಿಂದ ಎಲ್‌.ಆರ್‌. ಶಿವರಾಮೇಗೌಡ, ಈಶಾನ್ಯ ಪದವೀಧರ ಕ್ಷೇತ್ರದಿಂದ ಎನ್‌.ಪ್ರತಾಪ್‌ ರೆಡ್ಡಿ, ನೈಋುತ್ಯ ಪದವೀಧರ ಕ್ಷೇತ್ರದಿಂದ ಅಶ್ವಿನ್‌ ಪೆರಾರ ಅವರು ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಆದೇಶ ಹೊರಡಿಸಿದ್ದಾರೆ.

ಸತತ ಮೂರು ಬಾರಿ ಗೆಲುವು ಸಾಧಿಸಿ ಪರಿಷತ್‌ಗೆ ಪ್ರವೇಶಿಸಿರುವ ಉಪಸಭಾಪತಿ ಮರಿತಿಬ್ಬೇಗೌಡ ಅವರು ನಾಲ್ಕನೇ ಬಾರಿಯೂ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಅಖಾಡಕ್ಕಿಳಿಯಲಿದ್ದಾರೆ. ಮರಿತಿಬ್ಬೇಗೌಡ ಕಾಂಗ್ರೆಸ್‌ನ ಲಕ್ಷ್ಮಣ್‌ ವಿರುದ್ಧ ಗೆಲುವು ಸಾಧಿಸಿದ್ದರು. 2016ರಲ್ಲಿ ಉಪಚುನಾವಣೆ ಮೂಲಕ ಪರಿಷತ್‌ ಪ್ರವೇಶ ಪಡೆದ ಜೆಡಿಎಸ್‌ ವಕ್ತಾರ ರಮೇಶ್‌ ಬಾಬು ಮತ್ತೊಮ್ಮೆ ಪರೀಕ್ಷೆಗಿಳಿಯಲಿದ್ದಾರೆ. ಉಪಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಇದ್ದು, 10 ಸಾವಿರ ಮತಗಳನ್ನು ಪಡೆದು ಎದುರಾಳಿ ವಿರುದ್ಧ ನಾಲ್ಕು ಸಾವಿರ ಮತಗಳ ಅಂತರದಲ್ಲಿ ಜಯಗಳಿಸಿದ್ದರು.

ನೈಋುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿರುವ ವಕೀಲ ಎಸ್‌.ಎಲ್‌. ಭೋಜೇಗೌಡ ಅವರು ಕಳೆದ ಬಾರಿ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಲು ಪ್ರಯತ್ನಿಸಿದ್ದರು. ಆದರೆ, ಟಿಕೆಟ್‌ ಸಿಕ್ಕಿರಲಿಲ್ಲ. ಹೀಗಾಗಿ ಮೊದಲ ಬಾರಿಗೆ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಅಖಾಡಕ್ಕಿಳಿಯಲಿದ್ದಾರೆ. ಮಾಜಿ ಶಾಸಕ ಎಲ್‌.ಆರ್‌.ಶಿವರಾಮೇಗೌಡ, ಎನ್‌.ಪ್ರತಾಪ್‌ ರೆಡ್ಡಿ ಮತ್ತು ಅಶ್ವಿನ್‌ ಪೆರಾರ ಅವರು ಮೊದಲ ಬಾರಿಗೆ ಪಕ್ಷದಿಂದ ಕಣಕ್ಕಿಳಿಯುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!