ಶೀಘ್ರ ಕಾಂಗ್ರೆಸ್-ಜೆಡಿಸ್ ಹಲವರು ಬಿಜೆಪಿಗೆ : ಜೋಶಿ

Published : Mar 30, 2018, 09:30 AM ISTUpdated : Apr 11, 2018, 01:11 PM IST
ಶೀಘ್ರ ಕಾಂಗ್ರೆಸ್-ಜೆಡಿಸ್ ಹಲವರು ಬಿಜೆಪಿಗೆ  : ಜೋಶಿ

ಸಾರಾಂಶ

ಬೇರೆ ಪಕ್ಷಗಳಿಂದ ಬಿಜೆಪಿಗೆ ಹಲವು ಮುಖಂಡರು ಸೇರ್ಪಡೆಯಾಗುವ ಸಾಧ್ಯತೆ ಇದೆ. ಆದರೆ ಯಾರಿಗೆ ಗೆಲ್ಲುವ ಅವಕಾಶವಿದೆಯೋ? ಯಾರು ಬಿಜೆಪಿ ಸಿದ್ಧಾಂತಕ್ಕೆ ಒಗ್ಗಿಕೊಳ್ಳುತ್ತಾರೋ ಅಂಥವರನ್ನು ಪಕ್ಷ ಸ್ವಾಗತಿಸುತ್ತದೆ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.

ಬೆಂಗಳೂರು : ಬೇರೆ ಪಕ್ಷಗಳಿಂದ ಬಿಜೆಪಿಗೆ ಹಲವು ಮುಖಂಡರು ಸೇರ್ಪಡೆಯಾಗುವ ಸಾಧ್ಯತೆ ಇದೆ. ಆದರೆ ಯಾರಿಗೆ ಗೆಲ್ಲುವ ಅವಕಾಶವಿದೆಯೋ? ಯಾರು ಬಿಜೆಪಿ ಸಿದ್ಧಾಂತಕ್ಕೆ ಒಗ್ಗಿಕೊಳ್ಳುತ್ತಾರೋ ಅಂಥವರನ್ನು ಪಕ್ಷ ಸ್ವಾಗತಿಸುತ್ತದೆ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಪಕ್ಷ ಈ ಸಲ ಅಧಿಕಾರಕ್ಕೆ ಬರುವುದು ಗ್ಯಾರಂಟಿ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್, ಜೆಡಿಎಸ್‌ಗಳಿಂದ ಸಾಕಷ್ಟು ಜನ ಪಕ್ಷ ಸೇರಲು ಬರುತ್ತಿದ್ದಾರೆ. ಯಾರನ್ನು ಸೇರಿಸಿಕೊಳ್ಳಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸಲಿದ್ದಾರೆ ಎಂದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾ.30, 31ರಂದು ಮೈಸೂರು ಭಾಗದಲ್ಲಿ ಪ್ರವಾಸ ಕೈಗೊಳ್ಳುವ ವೇಳೆ ರಾಜವಂಶಸ್ಥ ಯದುವೀರ ಅವರನ್ನು ಭೇಟಿಯಾಗಲಿದ್ದಾರೆ. ಇದು ಬರೀ ಸೌಹಾರ್ದ ಭೇಟಿ ಅಷ್ಟೆ. ಇದಕ್ಕೆ ರಾಜಕೀಯ ಲೇಪನ ಬಳಿಯುವುದು ಸರಿಯಲ್ಲ ಎಂದರು.

ರಾಜ್ಯದಲ್ಲಿ ಬಹಳ ಹಿಂದೆಯೇ ಬಿಜೆಪಿ ಚುನಾವಣಾ ಪ್ರಚಾರ ಆರಂಭಿಸಿದೆ. ಮೈಸೂರು ಭಾಗದ ಪ್ರವಾಸ ಮುಗಿಸಿಕೊಂಡು ಅಮಿತ್ ಶಾ ಅವರು ಏ.2, 3ರಂದು ಬೆಳಗಾವಿ, ಬಾಗಲಕೋಟೆ, ಹಾವೇರಿ ಜಿಲ್ಲೆಗಳಿಗೂ ಭೇಟಿ ನೀಡಲಿದ್ದಾರೆ ಎಂದ ಅವರು, ಟಿಕೆಟ್ ಹಂಚಿಕೆ ಸಭೆಗಳು ಇದೇ ವೇಳೆ ನಡೆಯಲಿವೆ ಎಂದರು.

ಈ ಸಲ ಯಡಿಯೂರಪ್ಪ ನೇತೃತ್ವದ ಸರ್ಕಾರ ರಚನೆಯಾಗುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಜೋಶಿ, ಸಿದ್ದರಾಮಯ್ಯ ಕಾಂಗ್ರೆಸ್‌ನ ಕೊನೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಾಜೆಕ್ಟ್ ಖುಷಿ 3 ತಿಂಗಳ ಸ್ವಾಸ್ಥ್ಯ ಅಭಿಯಾನದಲ್ಲಿ ಹಲವು ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಂಡ ಬೆಂಗಳೂರು ಪೊಲೀಸ್!
ರೈತರಿಗೆ ಬಂಪರ್ ಲಾಟರಿ; ತೊಗರಿ ಬೆಲೆಗೆ ₹8000 ಬೆಂಬಲ ಬೆಲೆ ನಿಗದಿಪಡಿಸಿ, ಖರೀದಿ ಕೇಂದ್ರ ಆರಂಭ!