ಮಹಿಳೆಯರಿಗೇಕೆ ಜೆಡಿಎಸ್ ಗಾಳ..? ಹಿಂದೆ ಒಂದು ಬಲವಾದ ಉದ್ದೇಶ..

Published : Feb 26, 2018, 01:34 PM ISTUpdated : Apr 11, 2018, 01:11 PM IST
ಮಹಿಳೆಯರಿಗೇಕೆ ಜೆಡಿಎಸ್ ಗಾಳ..? ಹಿಂದೆ ಒಂದು ಬಲವಾದ ಉದ್ದೇಶ..

ಸಾರಾಂಶ

ಮಾದಿಗ, ಭೋವಿ, ಲಂಬಾಣಿ ಸಮುದಾಯ ಪ್ರಬಲವಾಗಿರುವ, ಲಿಂಗಾಯತ ಹಾಗೂ ಕುರುಬ ಮತಗಳು ನಿರ್ಣಾಯಕವಾಗಿರುವ ಈ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವನ್ನು ಹಾಲಿ ಕಾಂಗ್ರೆಸ್ಸಿನ ಕೆ. ಶಿವಮೂರ್ತಿ ಪ್ರತಿನಿಧಿಸುತ್ತಿದ್ದಾರೆ.

ಮಾಯಕೊಂಡ : ಮಾದಿಗ, ಭೋವಿ, ಲಂಬಾಣಿ ಸಮುದಾಯ ಪ್ರಬಲವಾಗಿರುವ, ಲಿಂಗಾಯತ ಹಾಗೂ ಕುರುಬ ಮತಗಳು ನಿರ್ಣಾಯಕವಾಗಿರುವ ಈ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವನ್ನು ಹಾಲಿ ಕಾಂಗ್ರೆಸ್ಸಿನ ಕೆ. ಶಿವಮೂರ್ತಿ ಪ್ರತಿನಿಧಿಸುತ್ತಿದ್ದಾರೆ.

ಅವರು ಮತ್ತೊಮ್ಮೆ ಕಣಕ್ಕಿಳಿಯಲು ಪ್ರಯತ್ನ ನಡೆಸುತ್ತಿದ್ದಾರೆ. ಕೆಎಸ್‌ಐಸಿ ಮಾಜಿ ಅಧ್ಯಕ್ಷ ಡಿ. ಬಸವರಾಜ, ಜಿ.ಪಂ. ಮಾಜಿ ಅಧ್ಯಕ್ಷ ಡಾ. ವೈ. ರಾಮಪ್ಪ, ಜಿ.ಪಂ. ಸದಸ್ಯ ಕೆ.ಎಸ್. ಬಸಂತಪ್ಪ, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಬಿ.ಎಚ್. ವೀರಭದ್ರಪ್ಪ ಕೂಡ ಟಿಕೆಟ್ ಪೈಪೋಟಿಯಲ್ಲಿದ್ದಾರೆ.

ಬಿಜೆಪಿಯಲ್ಲೂ ಹಲವು ಆಕಾಂಕ್ಷಿಗಳು ಇದ್ದಾರೆ. ಮಾಜಿ ಶಾಸಕ ಎಂ.ಬಸವರಾಜ ನಾಯ್ಕ, ಪ್ರೊ.ಎನ್.ಲಿಂಗಣ್ಣ, ಮಾಯಕೊಂಡ ಆನಂದಪ್ಪ, ಕೆ.ಎಸ್.ಬಸವರಾಜ ಟಿಕೆಟ್‌ಗಾಗಿ ತಮ್ಮದೇ ಪ್ರಯತ್ನ ನಡೆಸಿದ್ದಾರೆ. ಮಹಿಳಾ ಮತಗಳ ಮೇಲೆ ಕಣ್ಣಿಟ್ಟಿರುವ ಜೆಡಿಎಸ್, ಶೀಲಾ ನಾಯ್ಕ ಅವರಿಗೆ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲೇ ಟಿಕೆಟ್ ಘೋಷಣೆ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ