
ಬೆಂಗಳೂರು (ನ. 27): ಅನಾರೋಗ್ಯದಿಂದ ಬಳಲುತ್ತಿದ್ದ ಜೆಡಿಎಸ್ ಮಾಜಿ ಶಾಸಕ ಹೆಚ್ ಎಸ್ ಪ್ರಕಾಶ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಹೃದಯ ಸಂಬಂಧಿತ ಕಾಯಿಲೆ ಹಾಗೂ ಕಿಡ್ನಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಹೆಚ್ ಎಸ್ ಪ್ರಕಾಶ್ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಹಾಸನ ಸಣ್ಣಯ್ಯ ಪ್ರಕಾಶ್ ಹಾಸನ ಮೂಲದವರು. 1994 ರಲ್ಲಿ ಮೊದಲ ಬಾರಿಗೆ ಹಾಸನದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಾರೆ. ಗೆದ್ದು ಶಾಸಕರಾಗುತ್ತಾರೆ. 1999 ರ ಚುನಾವಣೆಗೂ ಸ್ಪರ್ಧಿಸುತ್ತಾರೆ. ಆದರೆ ಮತದಾರ ಕೈ ಹಿಡಿಯಲಿಲ್ಲ. ಸೋಲನುಭವಿಸುತ್ತಾರೆ. ನಂತರ ಸತತವಾಗಿ 2004, 2008 ಮತ್ತು 2013 ನೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಗೆಲುವನ್ನು ಸಾಧಿಸುತ್ತಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.