
ಬೆಂಗಳೂರು, [ಅ.08]: ಕುಟುಂಬ ರಾಜಕಾರಣ ತಪ್ಪಿಸಲು ಜೆಡಿಎಸ್ ಉಪಚುನಾವಣೆಗೆ ಮಾಸ್ಟರ್ ಪ್ಲಾನ್ ಮಾಡಿದೆ.
ರಾಮನಗರ ವಿಧಾನಸಭಾ ಉಪಚುನಾವಣೆಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಕಣಕ್ಕಿಳಿಯುವುದು ಪಕ್ಕಾ ಎನ್ನಲಾಗಿತ್ತು. ಆದರೆ, ಇದೀಗ ಜೆಡಿಎಸ್ ತನ್ನ ವರಸೆ ಬದಲಿಸಿದೆ.
ಒಂದು ವೇಳೆ ರಾಮನಗರದಿಂದ ಅನಿತಾ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಿದ್ರೆ ಕುಟುಂಬ ರಾಜಕಾರಣ ಅಪಾದನೆಗೆ ಗುರಿಯಾಗುವುದು ಗ್ಯಾರಂಟಿ ಎನ್ನುವುದು ಜೆಡಿಎಸ್ ನಾಯಕರಿಗೆ ಮನವರಿಕೆಯಾಗಿದೆ.
ರಾಮನಗರ ಉಪಚುನಾವಣೆ ಮೈತ್ರಿಗೆ ಬಿಗ್ ಶಾಕ್: ಎಂಎಲ್ಸಿ ಪುತ್ರ ಬಿಜೆಪಿಯತ್ತ?
ಇದ್ರಿಂದ ಕುಟುಂಬ ರಾಜಕಾರಣ ಅಪಾದನೆಯಿಂದ ಹೊರಬರಲು ಅನಿತಾ ಬದಲಿಗೆ ಪಿ. ಜಿಆರ್. ಸಿಂಧ್ಯಾ ಅಥವಾ ಸೊರಬ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನಿಲ್ಲಿಸಲು ಜೆಡಿಎಸ್ ಮಾಸ್ಟರ್ ಪ್ಲಾನ್ ಮಾಡಿದೆ.
ಅನಿತಾ ಕುಮಾರಸ್ವಾಮಿಗೆ ಟಿಕೆಟ್ ಕೊಟ್ರೆ, ಮುಂಬರುವ 2019ರ ಲೋಕಸಭಾ ಚುನಾವಣೆಗೆ ರೇವಣ್ಣ ಮಗ ಪ್ರಜ್ವಲ್ ರೇವಣ್ಣ ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ. ಇದನ್ನು ಅರಿತಿರುವ ಜೆಡಿಎಸ್ ನಾಯಕರು ಅನಿತಾ ಅವರನ್ನು ಹೊರತುಪಡಿಸಿ ಬೇರೆ ಅಭ್ಯರ್ಥಿಗೆ ಮಣೆ ಹಾಕಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಸಿಂಧ್ಯಾ ಅಥವಾ ಮಧುಬಂಗಾರಪ್ಪ ಇವರಿಬ್ಬರಲ್ಲಿ ಒಬ್ಬರಿಗೆ ಟಿಕೆಟ್ ಕೊಟ್ರೆ ಕಾಂಗ್ರೆಸ್ ಪಕ್ಷದಿಂದಲೂ ಸಾಥ್ ಸಿಗಲಿದೆ ಎನ್ನುವುದು ಜೆಡಿಎಸ್ ಮುಖಂಡರ ಲೆಕ್ಕಚಾರ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.