
ಬೆಂಗಳೂರು [ಜೂ.20] : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಅವರು ಕಾಂಗ್ರೆಸ್ನ ಹಿರಿಯ ಮುಖಂಡ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ನಿವಾಸಕ್ಕೆ ಭೇಟಿ ನೀಡಿ ಬುಧವಾರ ರಹಸ್ಯ ಚರ್ಚೆ ನಡೆಸಿದ್ದು, ಕುತೂಹಲ ಕೆರಳಿಸಿದೆ. ಮಂಗಳವಾರ ಎಚ್.ವಿಶ್ವನಾಥ್ ಅವರು ಲಕ್ಕಸಂದ್ರದ ರಾಮಲಿಂಗಾ ರೆಡ್ಡಿ ಅವರ ಮನೆಗೆ ಭೇಟಿ ನೀಡಿ ಸುದೀರ್ಘ ಮಾತುಕತೆ ನಡೆಸಿ ದರು.
ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಸಿಗದೆ ಬಹಿರಂಗವಾಗಿ ನಾಯಕರ ವಿರುದ್ಧ ಅಸಮಾಧಾನ ತೋಡಿಕೊಂಡಿದ್ದ ರಾಮಲಿಂಗಾ ರೆಡ್ಡಿ ಹಾಗೂ ಜೆಡಿಎಸ್ನಲ್ಲಿ ಸಚಿವ ಸ್ಥಾನ ಸಿಗದೆ ಪಕ್ಷದ ನಡೆಗಳ ಬಗ್ಗೆ ಬಹಿರಂಗ ಟೀಕೆ ಮಾಡುತ್ತಿರುವ ವಿಶ್ವನಾಥ್ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಮ ಲಿಂಗಾ ರೆಡ್ಡಿ, ನಾನು ಸಚಿವ ಸ್ಥಾನ ಕೊಡುವಂತೆ ಯಾರ ಮನೆ ಬಾಗಿಲಿಗೂ ಹೋಗಿ ಕೇಳುವುದಿಲ್ಲ. ಸಚಿವ ಸ್ಥಾನದ ಆಸೆ ನನಗಿಲ್ಲ. ಸಚಿವ ಸ್ಥಾನಗಳ ಹಂಚಿಕೆಯಲ್ಲಿ ತಾರತಮ್ಯ ಆಗಿರುವ ಬಗ್ಗೆ ಮಾತನಾಡಿದ್ದೇನೆ ಅಷ್ಟೇ ಎಂದರು. ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿದ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಎಲ್ಲರೂ ದೆಹಲಿಗೆ ಹೋಗಿದ್ದು ಏಕೆ ಎಂದು ನನಗೆ ಗೊತ್ತಿಲ್ಲ. ಅವರೆಲ್ಲಾ ನಮಗೆ ಹೇಳಿ ದೆಹಲಿಗೆ ಹೋಗುತ್ತಾರಾ ಎಂದು ಪ್ರಶ್ನಿಸಿದರು.
ಇದೇ ವೇಳೆ ಮಾಜಿ ಸಚಿವ ರೋಷನ್ ಬೇಗ್ ಅಮಾನತು ವಿಚಾರದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಜಿಂದಾಲ್ ಜಮೀನು ಪರಭಾರೆ ವಿವಾದದ ಬಗ್ಗೆ ಮಾತನಾಡಿದ ಅವರು, ಬಳ್ಳಾರಿ ಗಣಿಗಾರಿಕೆ ವಿಚಾರಕ್ಕೂ ಜಿಂದಾಲ್ ವಿಚಾರಕ್ಕೂ ಹೋಲಿಕೆ ಸರಿಯಲ್ಲ. ಈ ವಿಚಾರ ನನಗಿಂತ ಎಚ್.ಕೆ. ಪಾಟೀಲ್ ಅವರಿಗೆ ಚೆನ್ನಾಗಿ ಗೊತ್ತು. ಈ ವಿಚಾರ ಎಲ್ಲ ಗೊತ್ತಿರುವುದಕ್ಕೆ ನಾನೇನು ಸಚಿವ ಸಂಪುಟದಲ್ಲಿ ಇಲ್ಲ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.