
ಬೆಂಗಳೂರು (ಅ.11): ಜೆಡಿಎಸ್ ಯುವ ಮುಖಂಡ ಪ್ರಜ್ವಲ್ ರೇವಣ್ಣ ತಮ್ಮ ಪಕ್ಷದ ವಿರುದ್ಧವೇ ಮತ್ತೊಮ್ಮೆ ಗುಡುಗಿದ್ದಾರೆ.
ರಾಜರಾಜೇಶ್ವರಿ ನಗರದ ಜೆಡಿಎಸ್ ಸಭೆಯಲ್ಲಿ ಮಾತನಾಡಿ, ಹುಣಸೂರು ಘಟನೆಯಿಂದ ನಾನು ಸಾಕಷ್ಟು ನೊಂದಿದ್ದೇನೆ. ಕೆಲವು ಬಕೆಟ್ ರಾಜಕಾರಣಿಗಳು ನನ್ನ ವಿರುದ್ಧ ಷಡ್ಯಂತ್ರ ಮಾಡಿ, ನನ್ನ ಹೇಳಿಕೆ ತಿರುಚಿ, ರಾಜಕೀಯ ಬೆಳವಣಿಗೆಗೆ ಅಡ್ಡಿಪಡಿಸಿದರು. ನಾನು ಬೆಳೆದರೆ ಅವರ ಕಳ್ಳಾಟ ತಡೆಯುತ್ತೇನೆ ಅನ್ನೋ ಅವರಿಗೆ ಭಯ ಕಾಡ್ತಿತ್ತು ಎಂದರು. ರಾಜರಾಜೇಶ್ವರಿ ತಾಯಿ ಆಶೀರ್ವಾದ ನಮ್ಮ ಕುಟುಂಬದ ಮೇಲಿದೆ. ಆರ್ ಆರ್ ನಗರ ನನಗೆ ಪುನರ್ಜನ್ಮ ನೀಡಲಿದೆ ಎಂದು ಭಾವಿಸುತ್ತೇನೆ ಎಂದು ತಮ್ಮ ರಾಜಕೀಯ ನಡೆಯನ್ನು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.