ದೇವೇಗೌಡ, ಎಚ್‌ಡಿಕೆ ಬಿಟ್ಟು ನಮ್ಮಲ್ಲಿ ಶನಿಗಳಿಲ್ಲ ಎಂದ ಜೆಡಿಎಸ್ ಸಚಿವ

Published : Oct 02, 2018, 09:18 AM IST
ದೇವೇಗೌಡ, ಎಚ್‌ಡಿಕೆ ಬಿಟ್ಟು  ನಮ್ಮಲ್ಲಿ ಶನಿಗಳಿಲ್ಲ ಎಂದ ಜೆಡಿಎಸ್ ಸಚಿವ

ಸಾರಾಂಶ

ಜೆಡಿಎಸ್‌ ವರಿಷ್ಠರಾದ ಎಚ್‌.ಡಿ.ದೇವೇಗೌಡ ಮತ್ತು ಎಚ್‌.ಡಿ.ಕುಮಾರಸ್ವಾಮಿ ಬಿಟ್ಟು ನಮ್ಮಲ್ಲಿ ಯಾವ ರಾಹು, ಕೇತು, ಶನಿ ಇಲ್ಲ ಎಂದು ಹೇಳುವ ಮೂಲಕ ಸಚಿವ ಪುಟ್ಟರಾಜು ಪೇಚಿಗೆ ಸಿಲುಕಿದರು.   

ಬೆಂಗಳೂರು (ಅ. 02):  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಟಾಂಗ್‌ ನೀಡುವ ಭರದಲ್ಲಿ ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ಅವರು ತಮ್ಮದೇ ಪಕ್ಷದ ವರಿಷ್ಠರನ್ನು ಟೀಕಿಸಿ ಮುಜುಗರಕ್ಕೀಡು ಮಾಡಿದ ಸಂಗತಿ ನಡೆದಿದೆ.

ಜೆಡಿಎಸ್‌ ವರಿಷ್ಠರಾದ ಎಚ್‌.ಡಿ.ದೇವೇಗೌಡ ಮತ್ತು ಎಚ್‌.ಡಿ.ಕುಮಾರಸ್ವಾಮಿ ಬಿಟ್ಟು ನಮ್ಮಲ್ಲಿ ಯಾವ ರಾಹು, ಕೇತು, ಶನಿ ಇಲ್ಲ ಎಂದು ಹೇಳುವ ಮೂಲಕ ಸಚಿವ ಪುಟ್ಟರಾಜು ಪೇಚಿಗೆ ಸಿಲುಕಿದರು.

ಸೋಮವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜತೆ ಮಾತನಾಡುವ ವೇಳೆ ಯಡಿಯೂರಪ್ಪನವರು ‘ಜೆಡಿಎಸ್‌ನಲ್ಲಿ ರಾಹು, ಕೇತು, ಶನಿ ಇದ್ದಾರೆ ಎಂದಿದ್ದಾರಲ್ಲ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪುಟ್ಟರಾಜು ಅವಾಂತರ ಮಾಡಿದರು.

ತಕ್ಷಣವೇ ತಮ್ಮ ತಪ್ಪಿನ ಅರಿವಾಗಿ ಮಾತು ಬದಲಿಸಿ, ‘ಬಿಜೆಪಿಯಲ್ಲಿಯೇ ರಾಹು, ಕೇತು, ಶನಿ ಇದೆ. ಯಡಿಯೂರಪ್ಪ ಅವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ದೇವೇಗೌಡ ಮತ್ತು ಕುಮಾರಸ್ವಾಮಿ ಅವರು ದೈವಾಂಶ ಸಂಭೂತರು’ ಎಂದು ಹಾಡಿ ಹೊಗಳುವ ಮೂಲಕ ಮರೆಮಾಚುವ ಪ್ರಯತ್ನ ಮಾಡಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೀರಿಯಲ್‌ ನಟಿ ಅ*ತ್ಯಾಚಾರ ಮಾಡಿ ಬೆದರಿಸಿ ಮದುವೆ, ಈಗ ನಡುರಸ್ತೆಯಲ್ಲಿಯೇ ಅತ್ತೆ-ಮಾವನ ಮೇಲೆ ಹಲ್ಲೆ!
2 ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿಗೆ ಹೋಯ್ತು?, ವಿಪಕ್ಷಗಳ ಆಕ್ರೋಶಕ್ಕೆ ಹೆಬ್ಬಾಳ್ಕರ್ ಭಾವುಕ, ನಾನು ಮಹಿಳೆ ಎಂಬ ಕಾರಣಕ್ಕೆ ಹೀಗೆ ಮಾಡ್ತೀರಾ ಎಂದ ಸಚಿವೆ