ಕಳೆದ ರಾಜ್ಯಸಭಾ ಚುನಾವಣೆಯಲ್ಲಿ ಹಣ ಕೊಟ್ಟು ಮತ ಪಡೆದರೆ ರಾಹುಲ್ ಗಾಂಧಿ?

Published : Mar 22, 2018, 03:22 PM ISTUpdated : Apr 11, 2018, 01:11 PM IST
ಕಳೆದ ರಾಜ್ಯಸಭಾ ಚುನಾವಣೆಯಲ್ಲಿ ಹಣ ಕೊಟ್ಟು ಮತ ಪಡೆದರೆ ರಾಹುಲ್ ಗಾಂಧಿ?

ಸಾರಾಂಶ

ಜೆಡಿಎಸ್ ಬಿಜೆಪಿಯ ಬಿ ಟೀಂ ಎಂಬ ರಾಹುಲ್ ಗಾಂಧಿ ಆರೋಪಕ್ಕೆ  ಮಾಜಿ ಸಚಿವ ಹೆಚ್.ಡಿ.ರೇವಣ್ಣ ತಿರುಗೇಟು ನೀಡಿದ್ದಾರೆ. 

ಹಾಸನ (ಮಾ. 22):  ಜೆಡಿಎಸ್ ಬಿಜೆಪಿಯ ಬಿ ಟೀಂ ಎಂಬ ರಾಹುಲ್ ಗಾಂಧಿ ಆರೋಪಕ್ಕೆ  ಮಾಜಿ ಸಚಿವ ಹೆಚ್.ಡಿ.ರೇವಣ್ಣ ತಿರುಗೇಟು ನೀಡಿದ್ದಾರೆ. 

ಉಪಕಾರ ಮಾಡಿದವರನ್ನು ಮರೆಯುವುದು ಕಾಂಗ್ರೆಸ್ ಸಂಸ್ಕೃತಿ.  ಇವರಿಗೆ ಬೆಂಬಲ ನೀಡಿದ ಪಕ್ಷಗಳಿಗೆ ಟೋಪಿ ಹಾಕಿದ್ದಾರೆ. ಇವರಿಗೆ ನಾಚಿಗೆಯಾಗಬೇಕು ಎಂದಿದ್ದಾರೆ. 

ದೇವೇಗೌಡರಿಗೆ ಅಡ್ಜೆಸ್ಟ್’ಮೆಂಟ್ ರಾಜಕೀಯ ಗೊತ್ತಿಲ್ಲ. ಗೊತ್ತಿದ್ದರೆ  ಪ್ರಧಾನಿ ಹುದ್ದೆ ಬಿಟ್ಟು ಬರುತ್ತಿರಲಿಲ್ಲ. ಯುಪಿಎ ಸರಕಾರಕ್ಕೆ ಯಾರು ಸಹಾಯ ಮಾಡಿದ್ರು ಅನ್ನೋದನ್ನು ರಾಹುಲ್ ಗಾಂಧಿ ಅವರ ತಾಯಿ ಬಳಿ ಕೇಳಲಿ.  ಹೊಂದಾಣಿಕೆ ರಾಜಕೀಯ ಮಾಡಿದ್ದು ಅವರು ಎಂದು ಟಾಂಗ್ ನೀಡಿದ್ದಾರೆ. 

ರಾಹುಲ್ ಗಾಂಧಿ ಸಿದ್ಧ ಭಾಷಣ  ಓದುವುದನ್ನು  ನಿಲ್ಲಿಸಲಿ.  ದೇವೇಗೌಡರ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.  ರಾಹುಲ್ ಗಾಂಧಿಗೆ ಅನುಭವದ ಕೊರತೆ ಇದೆ.  ಹೀಗಾಗಿ ಅವರ ತಾಯಿಯನ್ನು ಕೇಳಿ ನಂತರ ಮಾತನಾಡಲಿ.  ಇವರಿಂದ ನಾವು ರಾಜಕಾರಣ ಕಲಿಯಬೇಕಾ ಎಂದಿದ್ದಾರೆ. 

ಕಳೆದ ರಾಜ್ಯಸಭೆ ಚುನಾವಣೆಯಲ್ಲಿ ಹಣಕೊಟ್ಟು ಮತ ಪಡೆದಿಲ್ಲ ಎಂದು ರಾಹುಲ್ ಪ್ರಮಾಣ ಮಾಡಿ ಹೇಳಲಿ ಎಂದು ಸವಾಲು ಹಾಕಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಗ್ ಬಾಸ್ ಪುಟುಗೋಸಿ ಶೋ, ಆಕ್ರೋಶಕ್ಕೆ ಗುರಿಯಾದ ಬೆಂಗಳೂರು ಕರವೇ ನಾಯಕನ ಹೇಳಿಕೆ
ಮುಂದಿನ ಚುನಾವಣೆಗೆ ನಾನು ನಿಲ್ಲದಿದ್ದರೂ ಸರಿ, ಆರ್.ಅಶೋಕ್ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಿ ಸೋಲಿಸಿಯೇ ಸಿದ್ಧ!