ಜೆಡಿಎಸ್ ಶಾಸಕನ ಸಹೋದರನಿಂದ ವಕೀಲನ ಮೇಲೆ ಗೂಂಡಾಗಿರಿ

Published : Dec 17, 2017, 07:52 AM ISTUpdated : Apr 11, 2018, 12:55 PM IST
ಜೆಡಿಎಸ್ ಶಾಸಕನ ಸಹೋದರನಿಂದ ವಕೀಲನ ಮೇಲೆ ಗೂಂಡಾಗಿರಿ

ಸಾರಾಂಶ

ಚಿಕ್ಕನಾಯಕನಹಳ್ಳಿ  ಪಟ್ಟಣದಲ್ಲಿ ಹಾಕಿರುವ ಫ್ಲೆಕ್ಸ್ ಬಗ್ಗೆ ಮಾಹಿತಿ ಕೇಳಲು ಬಂದ ವಕೀಲ ಮಂಜುನಾಥ್ ಮೇಲೆ ದಯಾನಂದ್ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಪುರಸಭೆ ಕಚೇರಿಯಲ್ಲೇ ಈ ಘಟನೆ ನಡೆದಿದ್ದು, ದಯಾನಂದ್ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ತುಮಕೂರು(ಡಿ.17): ನಗರದ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಜೆಡಿಎಸ್  ಶಾಸಕ ಸುರೇಶ್ ಬಾಬು ಸಹೋದರ ಸಿ.ಟಿ ದಯಾನಂದ್ ಗೂಂಡಾಗಿರಿ ಪ್ರದರ್ಶಿಸಿದ್ದಾರೆ.

ಚಿಕ್ಕನಾಯಕನಹಳ್ಳಿ  ಪಟ್ಟಣದಲ್ಲಿ ಹಾಕಿರುವ ಫ್ಲೆಕ್ಸ್ ಬಗ್ಗೆ ಮಾಹಿತಿ ಕೇಳಲು ಬಂದ ವಕೀಲ ಮಂಜುನಾಥ್ ಮೇಲೆ ದಯಾನಂದ್ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಪುರಸಭೆ ಕಚೇರಿಯಲ್ಲೇ ಈ ಘಟನೆ ನಡೆದಿದ್ದು, ದಯಾನಂದ್ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದ್ದು, ಶಾಸಕನ ಸಹೋದರನ ವರ್ತನೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆಗೊಳಗಾದ ವಕೀಲ ಮಂಜುನಾಥ್, ನಿನ್ನೆ ಪುರಸಭೆ ಹೋಗಿ ತಮ್ಮದೊಂದು ಫ್ಲೆಕ್ಸ್ ಹಾಕಲು ಕಟ್ಟಬೇಕಾದ ಹಣದ ಬಗ್ಗೆ ವಿಚಾರಿಸಲು ತೆರಳಿದ್ದಾರೆ. ಆಗ ಅಲ್ಲೇ ಇದ್ದ ದಯಾನಂದ್ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಈ ಹಿಂದೆಯೂ ಸಹ ದಯಾನಂದ್ ಸಾಕಷ್ಟು ಜನರ ಮೇಲೆ ಗೂಂಡಾಗಿರಿ ನಡೆಸಿರೋ ಉದಾಹರಣೆಗಳಿವೆಯಂತೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಚ್‌ಎಎಲ್‌ ವಿಮಾನ ನಿಲ್ದಾಣವನ್ನು ಮತ್ತೆ ಸಾರ್ವಜನಿಕ ಬಳಕೆ ಪ್ರಸ್ತಾಪ ಪರಿಶೀಲನೆ: ಸಚಿವ ಎಂ.ಬಿ.ಪಾಟೀಲ್
Breaking ಸ್ಮೋಕ್ ಬಾಂಬ್ ಎಸೆದು ಸಿಕ್ಕ ಸಿಕ್ಕವರಿಗೆ ಚಾಕು ಇರಿದ ದುಷ್ಕರ್ಮಿ, 3 ಸಾವು, ಐವರು ಗಂಭೀರ