ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ ಜೆಡಿಎಸ್ ಶಾಸಕ..!

Published : Mar 02, 2018, 11:15 AM ISTUpdated : Apr 11, 2018, 12:47 PM IST
ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ ಜೆಡಿಎಸ್ ಶಾಸಕ..!

ಸಾರಾಂಶ

ಬಿಜೆಪಿ, ಕೆಜೆಪಿ ಹಾಗೂ ಬಿಎಸ್‌ಆರ್ ಕಾಂಗ್ರೆಸ್‌ನಿಂದಾಗಿ ಮತಗಳ ವಿಭಜನೆ ಯಾಗಿದ್ದರಿಂದ ಜೆಡಿಎಸ್‌ನ ಮಲ್ಲಿಕಾರ್ಜುನ ಖೂಬಾ 2013ರಲ್ಲಿ ನಿರಾಯಾಸವಾಗಿ ಆಯ್ಕೆಯಾಗಿದ್ದರು.

ಬಸವಕಲ್ಯಾಣ: ಬಿಜೆಪಿ, ಕೆಜೆಪಿ ಹಾಗೂ ಬಿಎಸ್‌ಆರ್ ಕಾಂಗ್ರೆಸ್‌ನಿಂದಾಗಿ ಮತಗಳ ವಿಭಜನೆ ಯಾಗಿದ್ದರಿಂದ ಜೆಡಿಎಸ್‌ನ ಮಲ್ಲಿಕಾರ್ಜುನ ಖೂಬಾ 2013ರಲ್ಲಿ ನಿರಾಯಾಸವಾಗಿ ಆಯ್ಕೆಯಾಗಿದ್ದರು.

ಆದರೆ ಈ ಬಾರಿ ಅವರು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಮರಾಠಾ ಸಮುದಾಯದ ಪ್ರಮುಖ ಮಾರುತಿ ಮೂಳೆ ಅವರು ಬಿಜೆಪಿ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದರು. ಖೂಬಾ ಪ್ರವೇಶದಿಂದಾಗಿ ಅವರಿಗೆ ಟಿಕೆಟ್ ತಪ್ಪುವ ಸಾಧ್ಯತೆ ಹೆಚ್ಚು.

ಮಾಜಿ ಸಚಿವ ಬಸವರಾಜ ಪಾಟೀಲ್ ಅಟ್ಟೂರ್ ಪುತ್ರ ಲಿಂಗರಾಜ್, ಜಿ.ಪಂ. ಮಾಜಿ ಅಧ್ಯಕ್ಷ ಅನೀಲ್ ಭೂಸಾರೆ, ಉದ್ಯಮಿ ಪ್ರದೀಪ ವಾತಡೆ ಕೂಡ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಟಿಕೆಟ್ ಕೈತಪ್ಪುವ ಹಿನ್ನೆಲೆಯಲ್ಲಿ ಲಿಂಗರಾಜ ಅವರು ಜೆಡಿಎಸ್‌ಗೆ ಸೇರಿದರೂ ಅಚ್ಚರಿ ಇಲ್ಲ. ಅಟ್ಟೂರ ಅವರು ಈ ಹಿಂದೆ ಜನತಾದಳದಲ್ಲಿದ್ದವರು, ಅಲ್ಲೇ ಮಂತ್ರಿಯಾಗಿದ್ದವರು.

ಕಾಂಗ್ರೆಸ್ಸಿನಿಂದ ಕೆಪಿಸಿಸಿ ಕಾರ್ಯದರ್ಶಿ ಬಿ. ನಾರಾಯಣ, ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಯ ಶಿವರಾಜ ನರಶೆಟ್ಟಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಆನಂದ ದೇವಪ್ಪ ಅವರು ಆಕಾಂಕ್ಷಿಗಳಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!