
ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಪ್ರಸನ್ನಕುಮಾರ್ ಹಾಗೂ ಜೆಡಿಎಸ್ನಿಂದ ಕಾಂಗ್ರೆಸ್ಗೆ ವಲಸೆ ಬರಲು ಸಜ್ಜಾಗಿರುವ ಅಖಂಡ ಶ್ರೀನಿವಾಸ ಮೂರ್ತಿ ನಡುವೆ ಕಾಂಗ್ರೆಸ್ ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆದಿದೆ. ಕಾಂಗ್ರೆಸ್ ನಾಯಕತ್ವ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಟಿಕೆಟ್ ನೀಡುವ ಭರವಸೆ ನೀಡಿದೆ. ಆದರೆ, ಮಾಜಿ ಸಚಿವ ಬಿ. ಬಸವಲಿಂಗಪ್ಪ ಅವರ ಪುತ್ರರಾದ ಪ್ರಸನ್ನ ಕುಮಾರ್ ಹೈಕಮಾಂಡ್ನಲ್ಲಿ ಪ್ರಬಲ ಸಂಪರ್ಕಗಳನ್ನು ಹೊಂದಿದ್ದಾರೆ.
ಈ ಪೈಪೋಟಿಯಲ್ಲಿ ಅಖಂಡ ಶ್ರೀನಿವಾಸ ಮೂರ್ತಿ ಟಿಕೆಟ್ ಗೆಲ್ಲುವ ಸಾಧ್ಯತೆ ಹೆಚ್ಚಿದ್ದರೂ ಪ್ರಸನ್ನಕುಮಾರ್ ಸಾಮರ್ಥ್ಯ ಕಡೆಗಣಿಸುವಂತಿಲ್ಲ. ಹಾಲಿ ಶಾಸಕರ ವಲಸೆಯಿಂದಾಗಿ ಜೆಡಿಎಸ್ನ ಬಲ ಏಕಾಏಕಿ ಕುಸಿದಂತಾಗಿದೆ. ಪರ್ಯಾಯ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಿದೆ. ಇನ್ನು ಬಿಜೆಪಿ ಸಂಘಟನೆ ಇಲ್ಲಿ ಹೇಳಿಕೊಳ್ಳುವಂತಿಲ್ಲ. ಕಳೆದ ಬಾರಿ ಸೋಲುಂಡಿರುವ ಪಳನಿವೇಲು ಅವರ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.