
ನಿನ್ನೆಯಷ್ಟೇ ಜೆಡಿಎಸ್ಗೆ ರಾಜೀನಾಮೆ ನೀಡಿದ್ದ ದೇವನಹಳ್ಳಿ ಶಾಸಕ ಪಿಳ್ಳ ಮುನಿಶಾಮಪ್ಪ ಇಂದು ರಾಜೀನಾಮೆ ಪತ್ರವನ್ನು ವಾಪಸ್ ಪಡೆದಿದ್ದಾರೆ. ಇವತ್ತು ಶಿವಾನಂದ ಸರ್ಕಲ್ ಬಳಿಯಿರುವ ಸ್ಪೀಕರ್ ಕೋಳಿವಾಡ ನಿವಾಸಕ್ಕೆ ಪತ್ನಿ ಉಮಾರೊಂದಿಗೆ ಆಗಮಿಸಿದ ಪಿಳ್ಳ ಮುನಿಶಾಮಪ್ಪ, ರಾಜೀನಾಮೆ ಪತ್ರವನ್ನು ಹಿಂಪಡೆದಿದ್ದಾರೆ. ಹೀಗಾಗಿ ಜೆಡಿಎಸ್ನಲ್ಲಿ ಶುರುವಾಗಿದ್ದ ರಾಜಕೀಯ ಹೈಡ್ರಾಮಾ ಅಂತ್ಯಗೊಂಡಿದೆ.
ನಂತರ ಮಾತನಾಡಿದ ಅವರು, ಹೊಸಕೋಟೆಯಲ್ಲಿರುವ ಮೂರನೇ ವ್ಯಕ್ತಿಯನ್ನು ಪಕ್ಷಕ್ಕೆ ತಂದಿದ್ದು ಬೇಸರವಾಗಿತ್ತು. ನಮ್ಮ ವರಿಷ್ಠರು ಈ ರೀತಿಯ ಸಮಸ್ಯೆಗಳು ಮತ್ತೆ ಆಗೋಲ್ಲ ಎಂಬ ಭರವಸೆ ನೀಡಿದ್ದಾರೆ. ಹೀಗಾಗಿ ನಾನು ರಾಜೀನಾಮೆ ಪತ್ರವನ್ನು ವಾಪಸ್ ಪಡೆಯುತ್ತಿದ್ದೇನೆ ಅಂತ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.