ಜೆಡಿಎಸ್ ಶಾಸಕರ ರಕ್ಷಣೆಗೆ ಈಗ ಮಾಸ್ಟರ್ ಪ್ಲಾನ್

Published : Jul 08, 2019, 01:22 PM IST
ಜೆಡಿಎಸ್ ಶಾಸಕರ ರಕ್ಷಣೆಗೆ ಈಗ ಮಾಸ್ಟರ್ ಪ್ಲಾನ್

ಸಾರಾಂಶ

ರಾಜ್ಯ ಮೈತ್ರಿ ಕೂಟದಲ್ಲಿ ವಿಕೆಟ್ ಪತನ ಪ್ರಕ್ರಿಯೆ ಮುಂದುವರಿದಿದೆ. ಶಾಸಕರು, ಸಚಿವರು ರಾಜೀನಾಮೆ ನೀಡುತ್ತಿದ್ದಾರೆ. ಈಗ ಉಳಿದ ಶಾಸಕರ ರಕ್ಷಣೆಗೆ ಜೆಡಿಎಸ್ ಮುಖಂಡರು ಪ್ಲಾನ್ ಮಾಡುತ್ತಿದ್ದಾರೆ. 

ಬೆಂಗಳೂರು [ಜು.08] : ರಾಜ್ಯ ರಾಜಕೀಯದಲ್ಲಿ ಹೈ ಡ್ರಾಮಾ ನಡೆಯುತ್ತಿದೆ. 13 ಶಾಸಕರ ರಾಜೀನಾಮೆ ಬೆನ್ನಲ್ಲೇ  ಹಲವರು ಸಚಿವರೂ ರಾಜೀನಾಮೆ ನೀಡಿದ್ದಾರೆ. ಇತ್ತ ಜೆಡಿಎಸ್ ತನ್ನ ಉಳಿದ ಶಾಸಕರನ್ನು ಮಡಿಕೇರಿ ರೆಸಾರ್ಟ್ ಗೆ ಶಿಫ್ಟ್ ಮಾಡಲು ಸಜ್ಜಾಗಿದೆ. 

ಇಂದು ಸಂಜೆ ವೇಳೆಗೆ ಜೆಡಿಎಸ್ ಶಾಸಕರು ಮಡಿಕೇರಿ ರೆಸಾರ್ಟ್ ಗೆ ಶಿಫ್ಟ್ ಆಗಲಿದ್ದಾರೆ. ಮಧ್ಯಾಹ್ನದ 2 ಗಂಟೆಗೆ ಶಾಸಕರೊಂದಿಗೆ ಸಿಎಂ ಕುಮಾರಸ್ವಾಮಿ ಸಭೆ ನಡೆಸಲಿದ್ದು, ಸಭೆ ಬಳಿಕ ಮಡಿಕೇರಿಯತ್ತ ಪ್ರಯಾಣ ಬೆಳೆಸಲಿದ್ದಾರೆ. 

ತಾಜ್ ವೆಸ್ಟೆಂಡ್ ನಲ್ಲಿ ಸಿಎಂ ಸಭೆ ನಡೆಸಲಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಶಾಸಕರಿಗೂ ತಾಜ್ ವೆಸ್ಟೆಂಡ್ ಗೆ ಬರುವಂತೆ ಬುಲಾವ್ ನೀಡಿದ್ದಾರೆ. ಬಳಿಕ ವಿಶೇಷ ಬಸ್ ಮೂಲಕ ಉಳಿದ ಶಾಸಕರನ್ನು ಮಡಿಕೇರಿಗೆ ಕರೆದೊಯ್ಯಲಾಗುತ್ತದೆ.

ಶಾಸಕರನ್ನು ಶಿಫ್ಟ್ ಮಾಡಲು ಮಡಿಕೇರಿಯಲ್ಲಿ ಮೂರು ರೆಸಾರ್ಟ್ ಗಳನ್ನು ಬುಕ್ ಮಾಡಲಾಗಿದೆ. ಖಾಸಗಿತನಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಕೆಲವು ರೆಸಾರ್ಟ್ ಗಳಲ್ಲಿ ಈಗಾಗಲೇ ಕೊಠಡಿಗಳನ್ನು ಬುಕ್ ಮಾಡಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದ 2ನೇ ರಾಜಧಾನಿ ಬೆಳಗಾವಿಗೆ ಉತ್ತಮ ಭವಿಷ್ಯ: ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಲೋಕಸಭೆಯಲ್ಲಿ 2 ರೈತಪರ ಮಸೂದೆ ಮಂಡನೆ: ಸಂಸದ ಡಾ.ಕೆ.ಸುಧಾಕರ್