ನನ್ನಂತವರು ಮಂತ್ರಿಯಾಗುವ ಕಾಲ ಇದಲ್ಲ: ಹೊರಟ್ಟಿ ಮಾತಿನ ಮರ್ಮವೇನು..?

Published : Jun 10, 2019, 03:43 PM ISTUpdated : Jun 10, 2019, 03:45 PM IST
ನನ್ನಂತವರು ಮಂತ್ರಿಯಾಗುವ ಕಾಲ ಇದಲ್ಲ: ಹೊರಟ್ಟಿ ಮಾತಿನ ಮರ್ಮವೇನು..?

ಸಾರಾಂಶ

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಜೆಡಿಎಸ್ ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅವರು ಪರೋಕ್ಷವಾಗಿ ಜೆಡಿಎಸ್ ನಾಯಕರ ವಿರುದ್ಧ ಅಸಾಧಾನ ವ್ಯಕ್ತಪಡಿಸಿದ್ದಾರೆ.

ಗದಗ, (ಜೂನ್.10): ಅಸಮಾಧಾವನ್ನು ಶಮನಗೊಳಿಸಲು ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜೂನ್ 12ರಂದು ಸಂಪುಟ ವಿಸ್ತರಣೆ ಮಾಡಲು ನಿರ್ಧರಿಸಿದ್ದಾರೆ.

ಇದರ ಮಧ್ಯೆ ಹಿರಿಯ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅವರು ಪರೋಕ್ಷವಾಗಿ ತಮ್ಮ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ.

‘ದೇವೇಗೌಡ್ರು ಗಮನಿಸಲಿ’ ಹೊರಟ್ಟಿ ಮಾತಿಗೆ ಕಾಂಗ್ರೆಸ್ ಕಿಡಿ

ಈ ಬಗ್ಗೆ ಗದಗನಲ್ಲಿಂದು ಮಾತನಾಡಿದ ಹೊರಟ್ಟಿ, ಶಾಸಕರಾದವರು ಎಲ್ಲರೂ ಮಂತ್ರಿಯಾಗುವ ಆಸೆ ಇಟ್ಟುಕೊಂಡಿದ್ದಾರೆ.  ಹೀಗಾಗಿ ನನ್ನಂತವರು ಮಂತ್ರಿ ಆಗುವ ಕಾಲ ಇದಲ್ಲ ಎಂದು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ನಾನು ತತ್ವ ಸಿದ್ದಾಂತದ ಮೇಲೆ ರಾಜಕಾರಣ ಮಾಡಿದವನು. ಈ ಹಿಂದೆ ಶಾಸಕರನ್ನು ಕರೆದು ಮಂತ್ರಿ ಮಾಡುತ್ತಿದ್ದರು. ಈಗ ಯಾರನ್ನು ಮಂತ್ರಿ ಮಾಡಬೇಕು ಎನ್ನುವುದು ಮುಖಂಡರಿಗೆ ತಿಳಿಯದಂತಾಗಿದೆ ಎಂದರು.

ಶಾಸಕರಾದವರು ಮಂತ್ರಿಯಾಗಿ ಕೆಲಸ ಮಾಡಬೇಕು ಎಂದು ಆಸೆ ಪಡುವುದು ತಪ್ಪು.  ಜನ ಅಧಿಕಾರ ಕೊಟ್ಟಿದ್ದು,  ಶಾಸಕರಾಗಿ ಸರ್ಕಾರದ ಕೆಲಸವನ್ನು ಮಾಡಿ ಗೌರವ ತರಬೇಕೆಂದು ಹೇಳಿದರು.

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಬಸವರಾಜ್ ಹೊರಟ್ಟಿ ಅವರು ಈ ಮಾತುಗಳನ್ನು ಗಮನಿಸಿದರೆ, ನಿಷ್ಠಾವಂತರಿಗೆ ಇದು ಕಾಲವಲ್ಲ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. .

ವಿಧಾನಸಭೆ ವಿಸರ್ಜಿಸಿ, ಚುನಾವಣೆಗೆ ಹೋಗೋದು ಒಳ್ಳೆಯದು ಎಂದು  ಇತ್ತೀಚೆಗಷ್ಟೇ ಹೊರಟ್ಟಿ ಹೇಳಿಕೆ ನೀಡಿದ್ದರು. ಇವೆಲ್ಲವುಗಳನ್ನು ಗಮನಿಸಿದರೆ ಮೈತ್ರಿ ಮಾಡಿಕೊಂಡಿರುವುದು ಹೊರಟ್ಟಿ ಅವರಿಗೆ ಇಷ್ಟವಿಲ್ಲ ಎನ್ನುವುದು ತೋರಿಸುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗರ್ಭಧರಿಸಿ 9 ತಿಂಗಳು ಪೂರೈಸಿದ ಹಸುವಿಗೆ ಸೀಮಂತ ಮಾಡಿದ ಮಂಡ್ಯ ರೈತ
ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌