ಜನಾರ್ದನ ರೆಡ್ಡಿಗೆ ಖಡಕ್ ವಾರ್ನಿಂಗ್ ಕೊಟ್ಟ ಜೆಡಿಎಸ್ ನಾಯಕ..!

Published : Nov 15, 2018, 04:56 PM ISTUpdated : Nov 15, 2018, 04:57 PM IST
ಜನಾರ್ದನ ರೆಡ್ಡಿಗೆ ಖಡಕ್ ವಾರ್ನಿಂಗ್ ಕೊಟ್ಟ ಜೆಡಿಎಸ್ ನಾಯಕ..!

ಸಾರಾಂಶ

ಅಂಬಿಡೆಂಟ್ ಅವ್ಯವಹಾರ ಡೀಲ್ ಪ್ರಕರಣಕ್ಕೆ ಸಂಬಂಧಿದಿಂತೆ 4ನೇ ಜೈಲುವಾಸ ಅನುಭವಿಸಿ ಬೇಲ್ ಮೇಲೆ ಹೊರಬಂದ ಜನಾದರ್ದನ ರೆಡ್ಡಿ ಸಿಎಂ ಕುಮಾರಸ್ವಾಮಿ ವಿರುದ್ಧ ಕೆಂಡಕಾರಿದ್ದರು. ಇದೀಗ ರೆಡ್ಡಿ ವಿರುದ್ಧ ಜೆಡಿಎಸ್ ನಾಯಕರು ಮುಗಿಬಿದ್ದಿದ್ದಾರೆ.

ಬೆಂಗಳೂರು, [ನ.15]: ‘ಭೂತದ ಬಾಯಲ್ಲಿ ಭಗವದ್ಗೀತೆ’ ಹೇಳಿದಂತೆ ಅಂತ ರೆಡ್ಡಿ ಪುಣ್ಯಕೋಟಿ ಹೇಳಿಕೆಗೆ ವಿಧಾನಪರಿಷತ್ ಸದಸ್ಯ ಶರವಣ ಶರವಣ ವ್ಯಂಗ್ಯವಾಡಿದ್ದಾರೆ. 

ಇಂದು [ಗುರುವಾರ] ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ರೆಡ್ಡಿ  ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ರೆಡ್ಡಿ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಶರವಣ ಕಿಡಿ ಕಾರಿದರು. 

12 ವರ್ಷದ ಸೇಡು ತೀರಿಸಿಕೊಂಡ್ರು ಕುಮಾರಸ್ವಾಮಿ: ಜೈಲಿನಿಂದ ಹೊರಬಂದ ರೆಡ್ಡಿ ಕಿಡಿ

ರೆಡ್ಡಿಯವರೇ ನೀವು ಭೂತಾಯಿಯ ಒಡಲನ್ನು ಒಡೆದು ಸಂಪಾದನೆ ಮಾಡಿದ್ದಿರಿ. ಜೈಲಿನಲ್ಲಿ ಮಹಾಭಾರತ ಓದಿದರೆ ಸಾಲದು, ಅದನ್ನು ಕೆಲಸದಲ್ಲಿ ತೋರಿಸಬೇಕು ಅಂತ ಗರಂ ಆಗಿಯೇ ಸಲಹೆ ನೀಡಿದರು.

ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಜನಾರ್ದನ ರೆಡ್ಡಿ ರೌದ್ರಾವತಾರ..!

ನಿಮ್ಮ ನಾಲಿಗೆ ಮೇಲೆ ಹಿಡಿತವಿರಲಿ ಅಂತ ರಾಜ್ಯ ಜೆಡಿಎಸ್ ನಾಯಕರು ಗಾಲಿ ಜನಾರ್ದನ ರೆಡ್ಡಿಗೆ ಎಚ್ಚರಿಕೆ ನೀಡಿದರು.

ಜನಾರ್ದನ ರೆಡ್ಡಿ ನಿನ್ನೆ [ಬುಧವಾರ] ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಿಸಿಬಿ ಪೊಲೀಸ್ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ