ಜೆಡಿಎಸ್'ನಿಂದ ಚುನಾವಣೆ ಗೆಲ್ಲಲು ವಿಭಿನ್ನ ಮಾಸ್ಟ'ರ್ ಪ್ಲ್ಯಾನ್, ಸಮ್ಮಿಶ್ರ ಬಂದರೆ ಏನು ಯೋಜನೆ: ಹೆಚ್'ಡಿಕೆ ಮಾಹಿತಿ

Published : Dec 06, 2017, 08:55 PM ISTUpdated : Apr 11, 2018, 12:57 PM IST
ಜೆಡಿಎಸ್'ನಿಂದ ಚುನಾವಣೆ ಗೆಲ್ಲಲು ವಿಭಿನ್ನ ಮಾಸ್ಟ'ರ್ ಪ್ಲ್ಯಾನ್, ಸಮ್ಮಿಶ್ರ ಬಂದರೆ ಏನು ಯೋಜನೆ: ಹೆಚ್'ಡಿಕೆ ಮಾಹಿತಿ

ಸಾರಾಂಶ

ಈ ಬಾರಿ ನಾವು ಕಷ್ಟಪಡದೇ ಇದ್ದರೂ ಅರವತ್ತರಿಂದ ಎಪ್ಪತ್ತು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಆದರೆ ಸರ್ಕಾರ ರಚನೆಗೆ ಬೇಕಾದ ಸಂಖ್ಯೆ ತಲುಪುವುದು ನಮ್ಮ ಗುರಿ

ಬೆಂಗಳೂರು(ಡಿ.06): ಜೆಡಿಎಸ್ ಮುಂದಿನ ಚುನಾವಣೆ ಗೆಲ್ಲಲು ವಿಭಿನ್ನ ಮಾಸ್ಟರ್ ಪ್ಲ್ಯಾನ್ ಮಾಡಿಕೊಂಡಿದೆ. ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಚುನಾವಣಾ ಕಾರ್ಯ ಯೋಜನೆಗಳ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಚುನಾವಣೆಯಲ್ಲಿ ಹಿನ್ನಡೆಯಾಗಲು ಕಾರಣವಾದ ಅಂಶಗಳ ಪಟ್ಟಿ ಮಾಡಿಕೊಂಡಿದ್ದೇವೆ. 105 ಕ್ಷೇತ್ರದಲ್ಲಿ 70 ರಿಂದ 80 ಸ್ಥಾನ ಗೆಲ್ಲಲೇಬೇಕು.ಇಪ್ಪತ್ತರಿಂದ ಮೂವತ್ತು ಕ್ಷೇತ್ರ ಗಳಲ್ಲಿ ಅಭ್ಯರ್ಥಿಗಳ ಪೈಪೋಟಿ ಇದೆ. ಅಂತಹಾ ಕಡೆ ಆಕಾಂಕ್ಷಿಗಳ ನಡುವೆ ಸೌಹಾರ್ದತೆ ಮೂಡಿಸಬೇಕು. ಕಳೆದ ಬಾರಿ ಆದ ತಪ್ಪುಗಳು ಮರುಕಳಿಸಬಾರದು. ಹಾಗಾಗಿ ಎ, ಬಿ,ಸಿ ಕ್ಯಾಟಗರಿ ಅಂತಾ ಮಾಡಿಕೊಂಡಿದ್ದೇವೆ.  ಈ ಬಾರಿ ನಾವು ಕಷ್ಟಪಡದೇ ಇದ್ದರೂ ಅರವತ್ತರಿಂದ ಎಪ್ಪತ್ತು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಆದರೆ ಸರ್ಕಾರ ರಚನೆಗೆ ಬೇಕಾದ ಸಂಖ್ಯೆ ತಲುಪುವುದು ನಮ್ಮ ಗುರಿ. 114 ಸ್ಥಾನ ಗೆದ್ದರಷ್ಟೇ ರಾಜ್ಯಪಾಲರು ನಮಗೆ  ಅವಕಾಶ ನೀಡುತ್ತಾರೆ. ಬೇರೆ ಪಕ್ಷದ ಬಾಗಿಲು ತಟ್ಟಲು ನಮಗೆ ಇಷ್ಟ ಇಲ್ಲ. ಸಮ್ಮಿಶ್ರ ಸರ್ಕಾರ ಬಂದರೆ ನಮ್ಮ ಪಕ್ಷದ ಪ್ರಣಾಳಿಕೆ ಯಲ್ಲಿನ ಕಾರ್ಯಕ್ರಮ ಗಳನ್ನು ಜಾರಿ ತರೋದು ಕಷ್ಟ' ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ